<p><strong>ಬೆಂಗಳೂರು: </strong>ಕಡಿಮೆ ಬೆಲೆಗೆ ಬಟ್ಟೆ ಕೊಡಿಸುವ ಆಮಿಷವೊಡ್ಡಿ ತಮಿಳುನಾಡಿನ ವ್ಯಾಪಾರಿಯನ್ನು ನಗರಕ್ಕೆ ಕರೆಸಿ ₹ 8 ಲಕ್ಷ ಕಳ್ಳತನ ಮಾಡಿರುವ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಮಿಳುನಾಡಿನ ನಮಕ್ಕಲ್ ಜಿಲ್ಲೆಯ ಬಟ್ಟೆ ವ್ಯಾಪಾರಿ ಕೆ. ರಾಮಸ್ವಾಮಿ ಅವರುಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಉಮರ್ ಶಫಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ಎಂದು ಪೊಲೀಸರು ಹೇಳಿದರು.</p>.<p>‘ಸ್ನೇಹಿತರ ಪಾಲುದಾರಿಕೆಯಲ್ಲಿರಾಮಸ್ವಾಮಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆ ಪರಿಚಯವಾಗಿದ್ದ ಉಮರ್, ‘ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಟ್ಟೆ ಸಿಗುತ್ತವೆ. ಬಂದರೆ, ಕೊಡಿಸುತ್ತೇನೆ’ ಎಂದಿದ್ದ. ಅದನ್ನು ನಂಬಿದ್ದ ದೂರುದಾರ ಹಾಗೂ ಸ್ನೇಹಿತ, ₹ 9 ಲಕ್ಷ ನಗದು ಸಮೇತ ಮೇ 24ರಂದು ಬೆಂಗಳೂರಿಗೆ ಬಂದಿದ್ದರು.’</p>.<p>ರಾಮಸ್ವಾಮಿ ಅವರನ್ನು ಮೆಜೆಸ್ಟಿಕ್ನಸಂಗಮ್ ವಸತಿ ಗೃಹದಲ್ಲಿ ವ್ಯವಸ್ಥೆ ಮಾಡಿದ್ದರು. ಬಳಿಕ, ₹ 8 ಲಕ್ಷವಿದ್ದ ಆತನ ಬ್ಯಾಗ್ ಸಮೇತ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಡಿಮೆ ಬೆಲೆಗೆ ಬಟ್ಟೆ ಕೊಡಿಸುವ ಆಮಿಷವೊಡ್ಡಿ ತಮಿಳುನಾಡಿನ ವ್ಯಾಪಾರಿಯನ್ನು ನಗರಕ್ಕೆ ಕರೆಸಿ ₹ 8 ಲಕ್ಷ ಕಳ್ಳತನ ಮಾಡಿರುವ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಮಿಳುನಾಡಿನ ನಮಕ್ಕಲ್ ಜಿಲ್ಲೆಯ ಬಟ್ಟೆ ವ್ಯಾಪಾರಿ ಕೆ. ರಾಮಸ್ವಾಮಿ ಅವರುಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಉಮರ್ ಶಫಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ಎಂದು ಪೊಲೀಸರು ಹೇಳಿದರು.</p>.<p>‘ಸ್ನೇಹಿತರ ಪಾಲುದಾರಿಕೆಯಲ್ಲಿರಾಮಸ್ವಾಮಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆ ಪರಿಚಯವಾಗಿದ್ದ ಉಮರ್, ‘ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಟ್ಟೆ ಸಿಗುತ್ತವೆ. ಬಂದರೆ, ಕೊಡಿಸುತ್ತೇನೆ’ ಎಂದಿದ್ದ. ಅದನ್ನು ನಂಬಿದ್ದ ದೂರುದಾರ ಹಾಗೂ ಸ್ನೇಹಿತ, ₹ 9 ಲಕ್ಷ ನಗದು ಸಮೇತ ಮೇ 24ರಂದು ಬೆಂಗಳೂರಿಗೆ ಬಂದಿದ್ದರು.’</p>.<p>ರಾಮಸ್ವಾಮಿ ಅವರನ್ನು ಮೆಜೆಸ್ಟಿಕ್ನಸಂಗಮ್ ವಸತಿ ಗೃಹದಲ್ಲಿ ವ್ಯವಸ್ಥೆ ಮಾಡಿದ್ದರು. ಬಳಿಕ, ₹ 8 ಲಕ್ಷವಿದ್ದ ಆತನ ಬ್ಯಾಗ್ ಸಮೇತ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>