ಎಂ.ಬಿ.ಪ್ರಕಾಶ್ ವರದಿಯ ಅನ್ವಯ ಹೊಸದಾಗಿ ರಚನೆಯಾದ ತಾಲ್ಲೂಕುಗಳಲ್ಲಿ ಕನಿಷ್ಟ 14 ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಇವುಗಳನ್ನು ಬಿಟ್ಟು ಉಳಿದ ಇಲಾಖೆಗಳ ತಾಲ್ಲೂಕು ಮಟ್ಟದ ಕಚೇರಿಗಳನ್ನು ಸ್ಥಾಪಿಸಲು ಅನುಮತಿ ನೀಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿಯೂ ಕುಮಾರಸ್ವಾಮಿ ಭರವಸೆ ನೀಡಿದರು.