ಮುಖ್ಯಮಂತ್ರಿ ಉಸ್ತುವಾರಿಯಲ್ಲಿರುವ ಬೆಂಗಳೂರು ಅಭಿವೃದ್ಧಿ ಖಾತೆಗೆ ಸಂಬಂಧಿಸಿದ ಸಚಿವಾಲಯದಲ್ಲೇ ಬೃಹತ್ ಸಂಖ್ಯೆಯ ಕಡತಗಳು ದೀರ್ಘ ಕಾಲದಿಂದ ವಿಲೇವಾರಿಗೆ ಬಾಕಿ ಇರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಸುದ್ದಿಗಾರರ ಜತೆ ಮಾತನಾಡುವಾಗ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಮುಖ್ಯಮಂತ್ರಿಯಾದ ತಕ್ಷಣವೇ ಕಡತ ವಿಲೇವಾರಿ ತ್ವರಿತಕ್ಕೆ ಸೂಚನೆ ನೀಡಿದ್ದೆ’ ಎಂದರು.