<p><strong>ಬೆಂಗಳೂರು:</strong> ಮಹಾಲಕ್ಷ್ಮೀ ಲೇಔಟ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ನಾಗಪುರ ವಾರ್ಡ್ನಲ್ಲಿ ಸ್ಥಾಪಿಸಿರುವ ರಾಜ್ಕುಮಾರ್ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದಲ್ಲಿ ಬುಧವಾರ ಅನಾವರಣ ಮಾಡಿದರು.</p>.<p>ಈ ಪುತ್ಥಳಿಯನ್ನು ₹ 75 ಲಕ್ಷದಲ್ಲಿ ನಿರ್ಮಿಸಲಾಗಿದ್ದು, 4 ಅಡಿ ಅಗಲ ಹಾಗೂ 9 ಅಡಿ ಎತ್ತರವಿದೆ. ಈ ಪುತ್ಥಳಿ ಸುತ್ತಲೂ ಸಾದರಹಳ್ಳಿ ಕಲ್ಲುಗಳನ್ನು ಬಳಸಿ, ಪೀಠ ನಿರ್ಮಿಸಲಾಗಿದೆ. </p>.<p>‘ಪುರುಷ ಪ್ರಧಾನ ಸಮಾಜವಾದರೂ ಇತ್ತೀಚಿನದ ದಿನಗಳಲ್ಲಿ ಮಹಿಳೆಯರು ಅದ್ಭುತ ಸಾಧನೆ ಮಾಡುತ್ತಿದ್ದಾರೆ. ವಿಮಾನ, ಬಸ್ಗಳನ್ನು ಓಡಿಸುವವರಲ್ಲಿಯೂ ಮಹಿಳೆಯರಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯೂ ಮಹಿಳೆಯಾಗಿದ್ದಾರೆ. ಎಲ್ಲ ರಂಗದಲ್ಲಿಯೂ ಮಹಿಳೆಯರು ಛಾಪು ಮೂಡಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಸೇಫ್ ಸಿಟಿ ಪ್ರಾಜೆಕ್ಟ್ನಲ್ಲಿ ಸುರಕ್ಷತೆಗೆ ರಾಜ್ಯದಲ್ಲಿ 7 ಸಾವಿರ ಕ್ಯಾಮೆರಾ ಅಳವಡಿಸಲಾಗಿದೆ. ಮಹಿಳೆಯರ ಮೇಲಿನ ವಿಶ್ವಾಸದಿಂದ ಕಾನೂನು ಸಡಿಲಿಸಿ, ರಾತ್ರಿ ಪಾಳಯದಲ್ಲಿಯೂ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ’ ಎಂದರು. </p>.<p>ಚಲನಚಿತ್ರ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್, ‘ಅಪ್ಪಾಜಿ ಹೆಣ್ಣನ್ನು ಗೌರವದಿಂದ ಕಾಣುತ್ತಿದ್ದರು. ಹೆಣ್ಣನ್ನು ಪೂಜಿಸಬೇಕು ಎಂದು ಹೇಳುತ್ತಿದ್ದರು. ಮಹಿಳಾ ದಿನದಂದು ಅವರ ಪ್ರತಿಮೆ ಅನಾವರಣ ಖುಷಿಯ ವಿಚಾರ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹಾಲಕ್ಷ್ಮೀ ಲೇಔಟ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ನಾಗಪುರ ವಾರ್ಡ್ನಲ್ಲಿ ಸ್ಥಾಪಿಸಿರುವ ರಾಜ್ಕುಮಾರ್ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದಲ್ಲಿ ಬುಧವಾರ ಅನಾವರಣ ಮಾಡಿದರು.</p>.<p>ಈ ಪುತ್ಥಳಿಯನ್ನು ₹ 75 ಲಕ್ಷದಲ್ಲಿ ನಿರ್ಮಿಸಲಾಗಿದ್ದು, 4 ಅಡಿ ಅಗಲ ಹಾಗೂ 9 ಅಡಿ ಎತ್ತರವಿದೆ. ಈ ಪುತ್ಥಳಿ ಸುತ್ತಲೂ ಸಾದರಹಳ್ಳಿ ಕಲ್ಲುಗಳನ್ನು ಬಳಸಿ, ಪೀಠ ನಿರ್ಮಿಸಲಾಗಿದೆ. </p>.<p>‘ಪುರುಷ ಪ್ರಧಾನ ಸಮಾಜವಾದರೂ ಇತ್ತೀಚಿನದ ದಿನಗಳಲ್ಲಿ ಮಹಿಳೆಯರು ಅದ್ಭುತ ಸಾಧನೆ ಮಾಡುತ್ತಿದ್ದಾರೆ. ವಿಮಾನ, ಬಸ್ಗಳನ್ನು ಓಡಿಸುವವರಲ್ಲಿಯೂ ಮಹಿಳೆಯರಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯೂ ಮಹಿಳೆಯಾಗಿದ್ದಾರೆ. ಎಲ್ಲ ರಂಗದಲ್ಲಿಯೂ ಮಹಿಳೆಯರು ಛಾಪು ಮೂಡಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಸೇಫ್ ಸಿಟಿ ಪ್ರಾಜೆಕ್ಟ್ನಲ್ಲಿ ಸುರಕ್ಷತೆಗೆ ರಾಜ್ಯದಲ್ಲಿ 7 ಸಾವಿರ ಕ್ಯಾಮೆರಾ ಅಳವಡಿಸಲಾಗಿದೆ. ಮಹಿಳೆಯರ ಮೇಲಿನ ವಿಶ್ವಾಸದಿಂದ ಕಾನೂನು ಸಡಿಲಿಸಿ, ರಾತ್ರಿ ಪಾಳಯದಲ್ಲಿಯೂ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ’ ಎಂದರು. </p>.<p>ಚಲನಚಿತ್ರ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್, ‘ಅಪ್ಪಾಜಿ ಹೆಣ್ಣನ್ನು ಗೌರವದಿಂದ ಕಾಣುತ್ತಿದ್ದರು. ಹೆಣ್ಣನ್ನು ಪೂಜಿಸಬೇಕು ಎಂದು ಹೇಳುತ್ತಿದ್ದರು. ಮಹಿಳಾ ದಿನದಂದು ಅವರ ಪ್ರತಿಮೆ ಅನಾವರಣ ಖುಷಿಯ ವಿಚಾರ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>