ಬೆಂಗಳೂರು ಉತ್ತರದ ಯಶವಂತಪುರ, ಹೆಸರಘಟ್ಟ ಮತ್ತು ಯಲಹಂಕ ಹೋಬಳಿಯ 52 ಎಕರೆ ಡಿನೋಟಿಫಿಕೇಷನ್ಗೆ ಕರಡು ಸಿದ್ಧವಾಗಿತ್ತು. 193 ಎಕರೆ ಪ್ರದೇಶದ ಸ್ವಾಧೀನಕ್ಕೆ ನಿರ್ಧರಿಸಲಾಗಿತ್ತು. ‘ಪ್ರಾಥಮಿಕ ಅಧಿಸೂಚನೆ ಮಾಡುವಾಗ ಈ ಕಟ್ಟಡಗಳು ಗಮನಕ್ಕೆ ಬಂದಿರಲಿಲ್ಲವೇ’ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಅವರು, ‘ಎಲ್ಲ 245 ಎಕರೆ ಪ್ರದೇಶ ಅಂತಿಮ ಅಧಿಸೂಚನೆಯಲ್ಲಿರಲಿ’ ಎಂದು ಸೂಚಿಸಿದ್ದಾರೆ.