‘ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸವಲತ್ತುಗಳು ಇನ್ನೂ ದೊರೆತ್ತಿಲ್ಲ. ಕೇಂದ್ರ ಸರ್ಕಾರದ ಮನವೊಲಿಸಿ, ಪೂರ್ಣ ಸವಲತ್ತುಗಳನ್ನು ದೊರಕಿಸಿ ಕೊಡಬೇಕು. ಭುವನೇಶ್ವರಿ ಪ್ರತಿಮೆಯ ಸ್ಥಾಪನೆ ಮತ್ತು ಥೀಮ್ ಪಾರ್ಕ್ ನಿರ್ಮಿಸುತ್ತಿರುವುದು ಅಭಿನಂದನೀಯ. ಅಕ್ಷರಧಾಮ ಮಾದರಿಯಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಬೇಕು. ಕರ್ನಾಟಕದ ಪರಂಪರೆ ಮತ್ತು ಇತಿಹಾಸವನ್ನು ಪ್ರತಿಬಿಂಬಿಸುವ ಉದ್ಯಾನವಾಗಿಸಬೇಕು’ ಎಂದು ಟಿ.ಎಸ್. ನಾಗಾಭರಣ ಹೇಳಿದರು.