<p><strong>ಬೆಂಗಳೂರು</strong>: ಕಾಲಜ್ಞಾನಿ ಕೈವಾರ ನಾರೇಯಣ ತಾತಯ್ಯ ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯವೊಂದರಲ್ಲಿ ಅಧ್ಯಯನ ಪೀಠ ರಚಿಸಬೇಕೆಂಬ ಕರ್ನಾಟಕ ಬಲಿಜ ಮಹಾಸಭಾ ಬೇಡಿಕೆಯನ್ನು ಮಾನ್ಯ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಂಬಂಧ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಬುಧವಾರ ಆದೇಶಿಸಿದ್ದಾರೆ.</p>.<p>ಸಂಸದ ಪಿ.ಸಿ. ಮೋಹನ್ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಕರ್ನಾಟಕ ಬಲಿಜ ಮಹಾಸಭಾ ಮುಖಂಡರ ನಿಯೋಗ, ಹಲವು ಬೇಡಿಕೆಗಳುಳ್ಳ ಮನವಿ ಪತ್ರ ಸಲ್ಲಿಸಿತು. ಕೈವಾರ ತಾತಯ್ಯ ಅವರ ಹೆಸರಿನಲ್ಲಿ ಅಧ್ಯಯನ ಪೀಠ ರಚನೆಗೆ ಆದೇಶ ಹೊರಡಿಸುವಂತೆ ತಕ್ಷಣವೇ ನಿರ್ದೇಶನ ನೀಡಿದರು.</p>.<p>‘ಮುಖ್ಯಮಂತ್ರಿಯವರು ಅಧ್ಯಯನ ಪೀಠ ರಚನೆಗೆ ಸಮ್ಮತಿಸಿರುವುದರ ಜತೆಗೆ ಬಲಿಜ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 3–ಎ ಪಟ್ಟಿಯಿಂದ 2–ಎ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸುವಂತೆಯೂ ಬೇಡಿಕೆ ಸಲ್ಲಿಸಲಾಗಿದೆ. ಈ ಕುರಿತು ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ಬೊಮ್ಮಾಯಿ ನೀಡಿದ್ದಾರೆ’ ಎಂದು ಮೋಹನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಲಜ್ಞಾನಿ ಕೈವಾರ ನಾರೇಯಣ ತಾತಯ್ಯ ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯವೊಂದರಲ್ಲಿ ಅಧ್ಯಯನ ಪೀಠ ರಚಿಸಬೇಕೆಂಬ ಕರ್ನಾಟಕ ಬಲಿಜ ಮಹಾಸಭಾ ಬೇಡಿಕೆಯನ್ನು ಮಾನ್ಯ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಂಬಂಧ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಬುಧವಾರ ಆದೇಶಿಸಿದ್ದಾರೆ.</p>.<p>ಸಂಸದ ಪಿ.ಸಿ. ಮೋಹನ್ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಕರ್ನಾಟಕ ಬಲಿಜ ಮಹಾಸಭಾ ಮುಖಂಡರ ನಿಯೋಗ, ಹಲವು ಬೇಡಿಕೆಗಳುಳ್ಳ ಮನವಿ ಪತ್ರ ಸಲ್ಲಿಸಿತು. ಕೈವಾರ ತಾತಯ್ಯ ಅವರ ಹೆಸರಿನಲ್ಲಿ ಅಧ್ಯಯನ ಪೀಠ ರಚನೆಗೆ ಆದೇಶ ಹೊರಡಿಸುವಂತೆ ತಕ್ಷಣವೇ ನಿರ್ದೇಶನ ನೀಡಿದರು.</p>.<p>‘ಮುಖ್ಯಮಂತ್ರಿಯವರು ಅಧ್ಯಯನ ಪೀಠ ರಚನೆಗೆ ಸಮ್ಮತಿಸಿರುವುದರ ಜತೆಗೆ ಬಲಿಜ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 3–ಎ ಪಟ್ಟಿಯಿಂದ 2–ಎ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸುವಂತೆಯೂ ಬೇಡಿಕೆ ಸಲ್ಲಿಸಲಾಗಿದೆ. ಈ ಕುರಿತು ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ಬೊಮ್ಮಾಯಿ ನೀಡಿದ್ದಾರೆ’ ಎಂದು ಮೋಹನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>