ಬೆಂಗಳೂರು: ದೇಶದ ಎಲ್ಲ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ದೆಹಲಿಗೆ ತೆರಳುವರು.
ಶನಿವಾರ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿಯವರು ಶುಕ್ರವಾರ ರಾತ್ರಿಯೇ ದೆಹಲಿಗೆ ತೆರಳುವರು. ಶನಿವಾರ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಅವರು ದೆಹಲಿಯಿಂದ ವಾಪಸಾಗುವ ಸಮಯ ಇನ್ನೂ ನಿಗದಿಯಾಗಿಲ್ಲ ಎಂದು ಅವರ ಸಚಿವಾಲಯದ ಮೂಲಗಳು ತಿಳಿಸಿವೆ.