<p><strong>ಬೆಂಗಳೂರು</strong>: ಜಿಎಸ್ಟಿ ಮೊತ್ತ ಸೇರಿಸಿ ಟೆಂಡರ್ ಕರೆಯುವುದನ್ನು ರದ್ದುಪಡಿಸಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.</p>.<p>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿಯಾದರು.</p>.<p>‘2017–18ರ ಹೆಚ್ಚುವರಿ ಜಿಎಸ್ಟಿಯನ್ನು ಸರ್ಕಾರದ ವತಿಯಿಂದ ಪಾವತಿಸುವ ಬಗ್ಗೆಯೂ ಆರ್ಥಿಕ ಇಲಾಖೆಯವರು ಪರಿಶೀಲಿಸಬೇಕೆಂದು ನಿರ್ದೇಶನ ನೀಡಿದರು ಎಂದು ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್ ತಿಳಿಸಿದರು.</p>.<p>‘ಬಿಬಿಎಂಪಿ ಗುತ್ತಿಗೆದಾರರ 9 ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಕರೆದು ಮಾತನಾಡುವುದಾಗಿ ಭರವಸೆ ನೀಡಿದರು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಿಎಸ್ಟಿ ಮೊತ್ತ ಸೇರಿಸಿ ಟೆಂಡರ್ ಕರೆಯುವುದನ್ನು ರದ್ದುಪಡಿಸಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.</p>.<p>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿಯಾದರು.</p>.<p>‘2017–18ರ ಹೆಚ್ಚುವರಿ ಜಿಎಸ್ಟಿಯನ್ನು ಸರ್ಕಾರದ ವತಿಯಿಂದ ಪಾವತಿಸುವ ಬಗ್ಗೆಯೂ ಆರ್ಥಿಕ ಇಲಾಖೆಯವರು ಪರಿಶೀಲಿಸಬೇಕೆಂದು ನಿರ್ದೇಶನ ನೀಡಿದರು ಎಂದು ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್ ತಿಳಿಸಿದರು.</p>.<p>‘ಬಿಬಿಎಂಪಿ ಗುತ್ತಿಗೆದಾರರ 9 ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಕರೆದು ಮಾತನಾಡುವುದಾಗಿ ಭರವಸೆ ನೀಡಿದರು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>