ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯ ಒಪ್ಪುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಮಣಶ್ರೀ ಶರಣ ಪ್ರಶಸ್ತಿ’ ಪ್ರದಾನ
Published : 16 ನವೆಂಬರ್ 2023, 16:38 IST
Last Updated : 16 ನವೆಂಬರ್ 2023, 16:38 IST
ಫಾಲೋ ಮಾಡಿ
Comments
10 ಮಂದಿಗೆ ಪ್ರಶಸ್ತಿ ಪ್ರದಾನ 
ಕಾರ್ಯಕ್ರಮದಲ್ಲಿ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರಿಗೆ ‘ರಮಣಶ್ರೀ ಶರಣ ಜೀವಮಾನ ಸಾಧನೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಇದು ₹ 50 ಸಾವಿರ ನಗದು ಒಳಗೊಂಡಿದೆ. ವೀಣಾ ಬನ್ನಂಜೆ ಬಸವರಾಜ ಸಾದರ ಎನ್. ತಿಮ್ಮಪ್ಪ ಹಾಗೂ ಓಂಕಾರ್‌ನಾಥ್ ಹವಾಲ್ದಾರ್ ಅವರಿಗೆ ‘ರಮಣಶ್ರೀ ಶರಣ ಹಿರಿಯ ಶ್ರೇಣಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ತಲಾ ₹ 40 ಸಾವಿರ ನಗದು ಒಳಗೊಂಡಿದೆ. ಎ.ಜೆ. ಶಿವಕುಮಾರ ದೇವರಾಜ ಪಿ. ಚಿಕ್ಕಹಳ್ಳಿ ಕುಮಾರ ಕಣವಿ ಹಾಗೂ ಜೆ.ಎಸ್. ಖಂಡೇರಾವ ಅವರಿಗೆ ‘ರಮಣಶ್ರೀ ಶರಣ ಉತ್ತೇಜನ ಶ್ರೇಣಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಇದು ತಲಾ ₹ 20 ಸಾವಿರ ನಗದು ಒಳಗೊಂಡಿದೆ. ಸ್ನೇಹಾ ಕಪ್ಪಣ್ಣ ಅವರಿಗೆ ‘ರಮಣಶ್ರೀ ಶರಣ ವಿಶೇಷ ಪುರಸ್ಕಾರ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರು ಪ್ರಶಸ್ತಿಯ ನಗದು ಹಾಗೂ ₹ 501 ಮೊತ್ತವನ್ನು ಪ್ರತಿಷ್ಠಾನಕ್ಕೆ ನೀಡಿದರು. ‘ಮುಂದಿನ ವರ್ಷದಿಂದ ವಚನ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳನ್ನೂ ಗುರುತಿಸಿ ಗೌರವಿಸುವ ಕಾರ್ಯಕ್ಕೆ ಈ ಹಣವನ್ನು ಬಳಸಿಕೊಳ್ಳುವಂತೆ’ ಮನವಿ ಮಾಡಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT