<p><strong>ಬೆಂಗಳೂರು:</strong> ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಯಾವುದೇ ಕ್ಷಣದಲ್ಲೂ ಬೆಂಗಳೂರಿಗೆ ಬರುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಸಂಜೆ ಮತ್ತು ಶುಕ್ರವಾರ ಬೆಳಗ್ಗಿನ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.</p>.<p>ವಿಜಯಪುರದಲ್ಲಿ ಗುರುವಾರ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಪಕ್ಷದ ಪ್ರಮುಖರ ಸಭೆಯನ್ನು ಮುಂದೂಡಿದ್ದರು.</p>.<p>ಶುಕ್ರವಾರ ವಿಜಯಪುರದಿಂದ ಬರುವುದು ತಡವಾದರೆ ಶಾ ಜತೆ ಭೇಟಿಯಾಗುವುದು ಕಷ್ಟವಾಗಬಹುದು ಎಂಬುದು ಮುಖ್ಯ ಕಾರಣ. ಅಲ್ಲದೆ, ದಾವೋಸ್ನಲ್ಲಿ ನಡೆಯುವ ಸಭೆಗಳಲ್ಲಿ ಮಾಡುವ ಭಾಷಣಕ್ಕೆ ತಯಾರಿ ಮಾಡಿಕೊಳ್ಳುವ ಉದ್ದೇಶದಿಂದ ಅವರು ತಮ್ಮ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಗುರುವಾರ ಬೆಳಿಗ್ಗೆ ಔಪಚಾರಿಕವಾಗಿ ಚುನಾವಣೆ ನಡೆಯಲಿದ್ದು, ನಳಿನ್ ಕುಮಾರ್ ಕಟೀಲ್ ಅವರೇ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಮಧ್ಯಾಹ್ನ 3 ಕ್ಕೆ ಅರಮನೆ ಮೈದಾನದಲ್ಲಿ ಕಟೀಲ್ ಅವರಿಗೆ ಅಭಿನಂದನಾ ಸಭೆ ನಡೆಯಲಿದೆ. ಬಳಿಕ ಪಕ್ಷದ ಪ್ರಮುಖರ ಸಭೆ ನಡೆದರೆ, ಅದರಲ್ಲಿ ಪಾಲ್ಗೊಳ್ಳುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p><strong>ಹೈಕಮಾಂಡ್ ಸಂಸ್ಕೃತಿ ಬಗ್ಗೆ ಅಪಸ್ವರ</strong></p>.<p>‘ರಾಜ್ಯದಲ್ಲಿ ಪಕ್ಷದ ಪ್ರತಿ ನಿರ್ಣಯಕ್ಕೂ ದೆಹಲಿಯ ವರಿಷ್ಠರ ಅಪ್ಪಣೆಗೆ ಕಾದು ಕೂರುವಂತಾಗಿರುವುದು ಸರಿಯಲ್ಲ. ಕಾಂಗ್ರೆಸ್ನ ಹೈಕಮಾಂಡ್ ಸಂಸ್ಕೃತಿ ಬಿಜೆಪಿಯಲ್ಲಿ ನುಸುಳುತ್ತಿರುವುದಕ್ಕೆ ಸಾಕ್ಷಿ’ ಎಂದು ಬಿಜೆಪಿಯ ಕೆಲವು ಹಿರಿಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಉಪಚುನಾವಣೆ ಮುಗಿದು, ಒಂದು ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಆಗಿಲ್ಲ. ಈ ವಿದ್ಯಮಾನಗಳು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಕಡಿವಾಣ ಒಂದು ಮಿತಿಯಲ್ಲಿ ಇರಲಿ. ಎದ್ದು ನಿಲ್ಲುವುದಕ್ಕೂ ಕೂರುವುದಕ್ಕೂ ದೆಹಲಿಯತ್ತ ಮುಖ ಮಾಡಬೇಕು ಎಂದರೆ ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಯಾವುದೇ ಕ್ಷಣದಲ್ಲೂ ಬೆಂಗಳೂರಿಗೆ ಬರುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಸಂಜೆ ಮತ್ತು ಶುಕ್ರವಾರ ಬೆಳಗ್ಗಿನ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.</p>.<p>ವಿಜಯಪುರದಲ್ಲಿ ಗುರುವಾರ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಪಕ್ಷದ ಪ್ರಮುಖರ ಸಭೆಯನ್ನು ಮುಂದೂಡಿದ್ದರು.</p>.<p>ಶುಕ್ರವಾರ ವಿಜಯಪುರದಿಂದ ಬರುವುದು ತಡವಾದರೆ ಶಾ ಜತೆ ಭೇಟಿಯಾಗುವುದು ಕಷ್ಟವಾಗಬಹುದು ಎಂಬುದು ಮುಖ್ಯ ಕಾರಣ. ಅಲ್ಲದೆ, ದಾವೋಸ್ನಲ್ಲಿ ನಡೆಯುವ ಸಭೆಗಳಲ್ಲಿ ಮಾಡುವ ಭಾಷಣಕ್ಕೆ ತಯಾರಿ ಮಾಡಿಕೊಳ್ಳುವ ಉದ್ದೇಶದಿಂದ ಅವರು ತಮ್ಮ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಗುರುವಾರ ಬೆಳಿಗ್ಗೆ ಔಪಚಾರಿಕವಾಗಿ ಚುನಾವಣೆ ನಡೆಯಲಿದ್ದು, ನಳಿನ್ ಕುಮಾರ್ ಕಟೀಲ್ ಅವರೇ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಮಧ್ಯಾಹ್ನ 3 ಕ್ಕೆ ಅರಮನೆ ಮೈದಾನದಲ್ಲಿ ಕಟೀಲ್ ಅವರಿಗೆ ಅಭಿನಂದನಾ ಸಭೆ ನಡೆಯಲಿದೆ. ಬಳಿಕ ಪಕ್ಷದ ಪ್ರಮುಖರ ಸಭೆ ನಡೆದರೆ, ಅದರಲ್ಲಿ ಪಾಲ್ಗೊಳ್ಳುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p><strong>ಹೈಕಮಾಂಡ್ ಸಂಸ್ಕೃತಿ ಬಗ್ಗೆ ಅಪಸ್ವರ</strong></p>.<p>‘ರಾಜ್ಯದಲ್ಲಿ ಪಕ್ಷದ ಪ್ರತಿ ನಿರ್ಣಯಕ್ಕೂ ದೆಹಲಿಯ ವರಿಷ್ಠರ ಅಪ್ಪಣೆಗೆ ಕಾದು ಕೂರುವಂತಾಗಿರುವುದು ಸರಿಯಲ್ಲ. ಕಾಂಗ್ರೆಸ್ನ ಹೈಕಮಾಂಡ್ ಸಂಸ್ಕೃತಿ ಬಿಜೆಪಿಯಲ್ಲಿ ನುಸುಳುತ್ತಿರುವುದಕ್ಕೆ ಸಾಕ್ಷಿ’ ಎಂದು ಬಿಜೆಪಿಯ ಕೆಲವು ಹಿರಿಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಉಪಚುನಾವಣೆ ಮುಗಿದು, ಒಂದು ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಆಗಿಲ್ಲ. ಈ ವಿದ್ಯಮಾನಗಳು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಕಡಿವಾಣ ಒಂದು ಮಿತಿಯಲ್ಲಿ ಇರಲಿ. ಎದ್ದು ನಿಲ್ಲುವುದಕ್ಕೂ ಕೂರುವುದಕ್ಕೂ ದೆಹಲಿಯತ್ತ ಮುಖ ಮಾಡಬೇಕು ಎಂದರೆ ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>