‘ನಮ್ಮದು ಅಭಿವೃದ್ಧಿ ಹೊಂದುತ್ತಿರುವ ದೇಶ ಎಂಬುದನ್ನು ಕೇಳುತ್ತಲೇ ಇದ್ದೇವೆ. ದೇಶವನ್ನು ಸಮರ್ಥವಾಗಿ ಕಟ್ಟಿ, ಬಲಿಷ್ಠವಾಗಿ ಮರು ರೂಪಿಸುವ ಶಕ್ತಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಇದೆ. ಆದರೆ, ಈ ನೀತಿಯ ಬಗ್ಗೆ ಕೆಲವರು ರಾಜಕೀಯ ಮಾಡುತ್ತಿರುವುದು ಬೇಸರವನ್ನುಂಟುಮಾಡಿದೆ.ಜ್ಞಾನ ಮತ್ತು ಕುಶಲತೆ ಈಗ ಅತ್ಯಗತ್ಯ. ಜ್ಞಾನಕ್ಕೆ ಪೂರಕವಾಗಿ ಕುಶಲತೆಯೂ ಸೇರಿದರೆ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು’ ಎಂದರು.