<p><strong>ಬೆಂಗಳೂರು:</strong> ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕರ ಲಗೇಜು ಕಳವು ಮಾಡಿದ್ದ ಆರೋಪದಡಿ ಸಾಕ್ಷಿ ರಾಥೋಡ್ (23) ಎಂಬುವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.</p>.<p>‘ಲಗೇಜು ಕಳವಾದ ಬಗ್ಗೆ ಮೈಸೂರಿನ ಶ್ಯಾಮ್ ಶರ್ಮಾ ಎಂಬುವರು ದೂರು ನೀಡಿದ್ದರು. ಅದರನ್ವಯ ಆರೋಪಿ ಎನ್ನಲಾದ ಜೈಪುರದ ಸಾಕ್ಷಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರ ಶರ್ಮಾ ಅವರು ಕಳೆದ ನವೆಂಬರ್ 13ರಂದು ಜೈಪುರದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದರು. ನಿಲ್ದಾಣದಿಂದ ಹೊರಬರುತ್ತಿದ್ದ ವೇಳೆಯಲ್ಲಿ 50 ಗ್ರಾಂ ಚಿನ್ನಾಭರಣ ಹಾಗೂ ₹ 2.50 ಲಕ್ಷ ನಗದು ಇದ್ದ ಬ್ಯಾಗ್ ಕಳವಾಗಿತ್ತು. ಈ ಸಂಗತಿ ದೂರಿನಲ್ಲಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<p>‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿ, ವಿಮಾನ ನಿಲ್ದಾಣದಿಂದ ಹೊರ ಬರುವ ವೇಳೆಯಲ್ಲೇ ಲಗೇಜು ಕಳವು ಮಾಡಿದ್ದರು. ಕೆಲ ದಿನ ಬಿಟ್ಟು ವಾಪಸು ಜೈಪುರಕ್ಕೆ ಹೋಗಿದ್ದರು. ಇತ್ತೀಚೆಗೆ ಪುನಃ ನಗರಕ್ಕೆ ಬಂದಾಗ ಅವರನ್ನು ಸೆರೆ ಹಿಡಿಯಲಾಗಿದೆ’ ಎಂದೂ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕರ ಲಗೇಜು ಕಳವು ಮಾಡಿದ್ದ ಆರೋಪದಡಿ ಸಾಕ್ಷಿ ರಾಥೋಡ್ (23) ಎಂಬುವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.</p>.<p>‘ಲಗೇಜು ಕಳವಾದ ಬಗ್ಗೆ ಮೈಸೂರಿನ ಶ್ಯಾಮ್ ಶರ್ಮಾ ಎಂಬುವರು ದೂರು ನೀಡಿದ್ದರು. ಅದರನ್ವಯ ಆರೋಪಿ ಎನ್ನಲಾದ ಜೈಪುರದ ಸಾಕ್ಷಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರ ಶರ್ಮಾ ಅವರು ಕಳೆದ ನವೆಂಬರ್ 13ರಂದು ಜೈಪುರದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದರು. ನಿಲ್ದಾಣದಿಂದ ಹೊರಬರುತ್ತಿದ್ದ ವೇಳೆಯಲ್ಲಿ 50 ಗ್ರಾಂ ಚಿನ್ನಾಭರಣ ಹಾಗೂ ₹ 2.50 ಲಕ್ಷ ನಗದು ಇದ್ದ ಬ್ಯಾಗ್ ಕಳವಾಗಿತ್ತು. ಈ ಸಂಗತಿ ದೂರಿನಲ್ಲಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<p>‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿ, ವಿಮಾನ ನಿಲ್ದಾಣದಿಂದ ಹೊರ ಬರುವ ವೇಳೆಯಲ್ಲೇ ಲಗೇಜು ಕಳವು ಮಾಡಿದ್ದರು. ಕೆಲ ದಿನ ಬಿಟ್ಟು ವಾಪಸು ಜೈಪುರಕ್ಕೆ ಹೋಗಿದ್ದರು. ಇತ್ತೀಚೆಗೆ ಪುನಃ ನಗರಕ್ಕೆ ಬಂದಾಗ ಅವರನ್ನು ಸೆರೆ ಹಿಡಿಯಲಾಗಿದೆ’ ಎಂದೂ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>