<p><strong>ಬೆಂಗಳೂರು</strong>: ‘ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ‘ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ಜಾಗೃತಿ ಅಭಿಯಾನ ಭಾನುವಾರ ನಗರದ ವಿವಿಧ ವಲಯಗಳಲ್ಲಿ ನಡೆಯಿತು.</p>.<p>ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಮಾಹಿತಿ ನೀಡಲಾಯಿತು. ಪ್ರಾಣಿಗಳ ಕುರಿತು ಇರುವ ಕಾಯ್ದೆಗಳ ಬಗ್ಗೆ ಪರಿಚಯಿಸಲಾಯಿತು. ನಾಗರಿಕರು ಏನು ಮಾಡಬಹುದು-ಏನು ಮಾಡಬಾರದು, ಸಮಸ್ಯೆಯಾದರೆ ಯಾರನ್ನು ಸಂಪರ್ಕಿಸಬೇಕು ಎಂಬ ಮಾಹಿತಿ ನೀಡುವ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.</p>.<p>ಜನರಿಂದ ಸಮುದಾಯದ ಪ್ರಾಣಿಗಳಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ತಿಳಿ ಹೇಳಲಾಯಿತು. ಮನುಷ್ಯರಂತೆಯೇ ಪ್ರಾಣಿಗಳು ಎಂದು ತಿಳಿದು ಅವುಗಳ ಜೊತೆ ಸೌಹಾರ್ದವಾಗಿ ವರ್ತಿಸಬೇಕು. ಕ್ರೂರವಾಗಿ ನಡೆದುಕೊಳ್ಳಬಾರದು ಎಂದು ಅಧಿಕಾರಿಗಳು ತಿಳಿಸಿದರು.</p>.<p><strong>ನಾಲ್ಕು ವಲಯಗಳಲ್ಲಿ ಜಾಗೃತಿ</strong>: ಆರ್.ಆರ್ ನಗರ ವಲಯದ ಮೈಸೂರು ರಸ್ತೆಯ ಗೋಪಾಲನ್ ಆರ್ಕೇಡ್ ಮಾಲ್ನಲ್ಲಿ ನೃತ್ಯ ರೂಪಕದ ಮೂಲಕ ಸಮುದಾಯದ ಪ್ರಾಣಿಗಳ ಕುರಿತು ಅರಿವು ಮೂಡಿಸಲಾಯಿತು. 200ಕ್ಕೂ ಹೆಚ್ಚು ಮಂದಿಗೆ ಮಾನವ ಪ್ರಾಣಿಗಳ ಸಹಬಾಳ್ವೆಯ ಬಗ್ಗೆ ಅರಿವು ಮೂಡಿಸಲಾಯಿತು.</p>.<p>ಮಹಾದೇವಪುರದ ವಲಯ ವ್ಯಾಪ್ತಿಯಲ್ಲಿ ನೆಕ್ಸಸ್ ಶಾಂತಿನಿಕೇತನ, ಬ್ರೂಕ್ಫೀಲ್ಡ್, ಪಾರ್ಕ್ ಸ್ಕ್ವೇರ್, ನೆಕ್ಸಸ್ ವೈಟ್ಫೀಲ್ಡ್, ಬೆಂಗಳೂರು ಸೆಂಟ್ರಲ್ ಮಾಲ್ಗಳಲ್ಲಿ ಜಾಗೃತಿ ಅಭಿಯಾನ ನಡೆಸಲಾಯಿತು. </p>.<p>ಪೂರ್ವ ವಲಯದಲ್ಲಿ ಫನ್ ವರ್ಲ್ಡ್, ಕುಮಾರ ಪಾರ್ಕ್, ತರಳಬಾಳು ರಸ್ತೆ, ಬೊಮ್ಮನಹಳ್ಳಿ ವಲಯದಲ್ಲಿ ಕೋಡಿಚಿಕ್ಕನಹಳ್ಳಿಯ ಶನೇಶ್ವರ ದೇವಸ್ಥಾನ, ಕೂಡ್ಲು ಗೇಟ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.</p>.<p>ಸಮುದಾಯದ ಪ್ರಾಣಿಗಳ ಕುರಿತು ಬೀದಿ ನಾಟಕ, ನೃತ್ಯ ಮಾಡಲಾಯಿತು. ಭಿತ್ತಿಪತ್ರಗಳನ್ನು ವಿತರಿಸಲಾಯಿತು.</p>.<p>ಪಶುಪಾಲನಾ ವಿಭಾಗದ ಸಹಾಯಕ ನಿರ್ದೇಶಕರಾದ ಡಾ. ವೆಂಕಟೇಶ್, ಡಾ. ರುದ್ರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ‘ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ಜಾಗೃತಿ ಅಭಿಯಾನ ಭಾನುವಾರ ನಗರದ ವಿವಿಧ ವಲಯಗಳಲ್ಲಿ ನಡೆಯಿತು.</p>.<p>ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಮಾಹಿತಿ ನೀಡಲಾಯಿತು. ಪ್ರಾಣಿಗಳ ಕುರಿತು ಇರುವ ಕಾಯ್ದೆಗಳ ಬಗ್ಗೆ ಪರಿಚಯಿಸಲಾಯಿತು. ನಾಗರಿಕರು ಏನು ಮಾಡಬಹುದು-ಏನು ಮಾಡಬಾರದು, ಸಮಸ್ಯೆಯಾದರೆ ಯಾರನ್ನು ಸಂಪರ್ಕಿಸಬೇಕು ಎಂಬ ಮಾಹಿತಿ ನೀಡುವ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.</p>.<p>ಜನರಿಂದ ಸಮುದಾಯದ ಪ್ರಾಣಿಗಳಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ತಿಳಿ ಹೇಳಲಾಯಿತು. ಮನುಷ್ಯರಂತೆಯೇ ಪ್ರಾಣಿಗಳು ಎಂದು ತಿಳಿದು ಅವುಗಳ ಜೊತೆ ಸೌಹಾರ್ದವಾಗಿ ವರ್ತಿಸಬೇಕು. ಕ್ರೂರವಾಗಿ ನಡೆದುಕೊಳ್ಳಬಾರದು ಎಂದು ಅಧಿಕಾರಿಗಳು ತಿಳಿಸಿದರು.</p>.<p><strong>ನಾಲ್ಕು ವಲಯಗಳಲ್ಲಿ ಜಾಗೃತಿ</strong>: ಆರ್.ಆರ್ ನಗರ ವಲಯದ ಮೈಸೂರು ರಸ್ತೆಯ ಗೋಪಾಲನ್ ಆರ್ಕೇಡ್ ಮಾಲ್ನಲ್ಲಿ ನೃತ್ಯ ರೂಪಕದ ಮೂಲಕ ಸಮುದಾಯದ ಪ್ರಾಣಿಗಳ ಕುರಿತು ಅರಿವು ಮೂಡಿಸಲಾಯಿತು. 200ಕ್ಕೂ ಹೆಚ್ಚು ಮಂದಿಗೆ ಮಾನವ ಪ್ರಾಣಿಗಳ ಸಹಬಾಳ್ವೆಯ ಬಗ್ಗೆ ಅರಿವು ಮೂಡಿಸಲಾಯಿತು.</p>.<p>ಮಹಾದೇವಪುರದ ವಲಯ ವ್ಯಾಪ್ತಿಯಲ್ಲಿ ನೆಕ್ಸಸ್ ಶಾಂತಿನಿಕೇತನ, ಬ್ರೂಕ್ಫೀಲ್ಡ್, ಪಾರ್ಕ್ ಸ್ಕ್ವೇರ್, ನೆಕ್ಸಸ್ ವೈಟ್ಫೀಲ್ಡ್, ಬೆಂಗಳೂರು ಸೆಂಟ್ರಲ್ ಮಾಲ್ಗಳಲ್ಲಿ ಜಾಗೃತಿ ಅಭಿಯಾನ ನಡೆಸಲಾಯಿತು. </p>.<p>ಪೂರ್ವ ವಲಯದಲ್ಲಿ ಫನ್ ವರ್ಲ್ಡ್, ಕುಮಾರ ಪಾರ್ಕ್, ತರಳಬಾಳು ರಸ್ತೆ, ಬೊಮ್ಮನಹಳ್ಳಿ ವಲಯದಲ್ಲಿ ಕೋಡಿಚಿಕ್ಕನಹಳ್ಳಿಯ ಶನೇಶ್ವರ ದೇವಸ್ಥಾನ, ಕೂಡ್ಲು ಗೇಟ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.</p>.<p>ಸಮುದಾಯದ ಪ್ರಾಣಿಗಳ ಕುರಿತು ಬೀದಿ ನಾಟಕ, ನೃತ್ಯ ಮಾಡಲಾಯಿತು. ಭಿತ್ತಿಪತ್ರಗಳನ್ನು ವಿತರಿಸಲಾಯಿತು.</p>.<p>ಪಶುಪಾಲನಾ ವಿಭಾಗದ ಸಹಾಯಕ ನಿರ್ದೇಶಕರಾದ ಡಾ. ವೆಂಕಟೇಶ್, ಡಾ. ರುದ್ರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>