ಬೆಂಗಳೂರು: ಇಂದಿರಾ ಕ್ಯಾಂಟೀನ್ಗಳಲ್ಲಿ ಟೀ, ಕಾಫಿ ಕೊಡಲು ಬಿಬಿಎಂಪಿ ಮುಂದಾಗಿದೆ ಎಂದು ಸಚಿವ ಜಿ. ಪರಮೇಶ್ವರ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನವರಿಯಿಂದ ಇಂದಿರಾ ಕ್ಯಾಂಟೀನ್ಗಳಲ್ಲಿ ಕಾಫಿ, ಟೀ ಲಭ್ಯವಾಗಲಿದೆ’ಎಂದರು.
ಈಗಾಗಲೇ ಬೆಳಗಿನ ವೇಳೆ ₹ 5ಕ್ಕೆ ತಿಂಡಿ ನೀಡಲಾಗುತ್ತಿದೆ. ಅದೇ ಸ್ಥಳದಲ್ಲಿ ಐದು ರೂಪಾಯಿ ಟೀ ಅಥವಾ ಕಾಫಿ ಜೊತೆಗೆ ವಡಾ ನೀಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರ ಕಡೆಯಿಂದ ಬಂದ ಸಲಹೆ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.