ಬೆಂಗಳೂರು: ‘ಕೊಡಿಗೇಹಳ್ಳಿ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಬಾಬು ಅವರು ಅವಾಚ್ಯವಾಗಿ ನಿಂದಿಸಿ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಠಾಣೆ ಸಹೋದ್ಯೋಗಿಗಳಾದ ಪೊಲೀಸರು, ಜಂಟಿ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
‘ರಾಘವೇಂದ್ರ ಅವರು ಜ. 18ರಂದು ಕೊಡಿಗೇಹಳ್ಳಿ ಠಾಣೆಗೆ ವರ್ಗವಾಗಿ ಬಂದಿದ್ದಾರೆ. ಹೆಡ್ ಕಾನ್ಸ್ಟೆಬಲೊಬ್ಬರ ಮಾತು ಕೇಳಿ ಬಹುತೇಕ ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ದೂರುದಾರರನ್ನೇ ಬೆದರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ’ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.