ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಮುಖಂಡರಾದ ಎನ್.ಆರ್.ರಮೇಶ್, ಶ್ರೀಧರರೆಡ್ಡಿ, ರವಿ, ಲೋಕನಾಥ ರೆಡ್ಡಿ, ಗೀತಾ ವಿವೇಕಾನಂದ ಮುಂತಾದವರು ಲಕ್ಷ್ಮಿದೇವಿ ಸಮಾಧಿಗೆ ಪೂಜೆ ಸಲ್ಲಿಸಿ, ಮೃತ್ತಿಕೆ ಸಂಗ್ರಹಿಸಿದರು. ಬಿಜೆಪಿ ಸಂಘಟನಾ ಕಾರ್ಯದರ್ಶಿ ದಶರಥ ಇದ್ದರು. ಜತೆಗೆ, ಡೊಳ್ಳು ಕುಣಿತ ಮುಂತಾದ ಜಾನಪದ ನೃತ್ಯಗಳ ಮೆರುಗು ಆಕರ್ಷಕವಾಗಿತ್ತು.