‘ರಿಯಾಲಿಟಿ ಶೋನಿಂದ ಬಂದಿದ್ದ ಹಣವನ್ನು ನಿನ್ನ (ಸೋಮಶೇಖರ್) ಖಾತೆಗೆ ಜಮೆ ಮಾಡಿಸಲಾಗಿತ್ತು. ಆದರೆ, ನೀನು ಸಹ ಕಲಾವಿದರಿಗೆ ಯಾವುದೇ ಹಣ ನೀಡಿಲ್ಲ. ಇದರಿಂದ ಎಲ್ಲ ಕಲಾವಿದರಿಗೆ ತೊಂದರೆ ಆಗಿದೆ. ಎಲ್ಲರಿಗೂ ಹಣ ಕೊಡು. ಇಲ್ಲದಿದ್ದರೆ, ಪರಿಣಾಮ ಎದುರಿಸಬೇಕಾಗುತ್ತದೆ. ಠಾಣೆಗೆ ಹೋಗಿ ದೂರು ನೀಡುತ್ತೇವೆ’ ಎಂಬ ಸಂಭಾಷಣೆ ಆಡಿಯೊದಲ್ಲಿದೆ. ಇದೇ ಆಡಿಯೊವನ್ನೇ ಸೋಮಶೇಖರ್, ಪೊಲೀಸರಿಗೆ ನೀಡಿದ್ದಾರೆ.