<p><strong>ಬೊಮ್ಮನಹಳ್ಳಿ:</strong> ಹಾಸಿಗೆ ಕೊರತೆ ನೀಗಿಸಲು ಎಚ್ಎಸ್ಆರ್ ಬಡಾವಣೆಯಲ್ಲಿರುವ ಸರ್ಕಾರಿ ವಿದ್ಯಾರ್ಥಿ ನಿಲಯವನ್ನು ಆಮ್ಲಜನಕ ಪೂರೈಕೆ ಸಹಿತ 150 ಹಾಸಿಗೆಗಳ ಕೊರೊನಾ ಆರೈಕೆ ಕೇಂದ್ರ ತೆರೆಯಲಾಗಿದೆ.</p>.<p>ರೋಗಿಗಳಿಗೆ ಉಚಿತ ಔಷಧ, ಊಟದ ವ್ಯವಸ್ಥೆ ಮಾಡಲಾಗಿದೆ. ಆಮ್ಲಜನಕ ಕಾನ್ಸನ್ಟ್ರೇಟರ್ ಗಳು ಹಾಗು ತುರ್ತು ಸಂದರ್ಭಕ್ಕೆ ತ್ವರಿತವಾಗಿ ಆ್ಯಂಬುಲೆನ್ಸ್ ಸೇವೆಯನ್ನು ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.</p>.<p>ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ 'ಸೋಂಕಿತರು ಆಸ್ಪತ್ರೆಗೆ ಬಂದಾಗ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಕಲ ಸೌಲಭ್ಯವನ್ನು ಒದಗಿಸಲಾಗಿದೆ. ಇದರ ಜತೆ ಈಗಾಗಲೇ ಸಿಂಗಸಂದ್ರದಲ್ಲಿ 50 ಹಾಸಿಗೆ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದರು.</p>.<p>‘ಹೊಂಗಸಂದ್ರದಲ್ಲಿ 100 ಹಾಸಿಗೆ, ಅರಕೆರೆ, ಪುಟ್ಟೇನಹಳ್ಳಿಯಲ್ಲೂ ಇದೇ ರೀತಿ ಆರೈಕೆ ತೆರೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಮೂರು ದಿನದಲ್ಲಿ ಒಟ್ಟು 500 ಹಾಸಿಗೆ ವ್ಯವಸ್ಥೆಯನ್ನು ಮಾಡಲಾಗುವುದು' ಎಂದರು.</p>.<p>ಬೊಮ್ಮನಹಳ್ಳಿ ಬಿಬಿಎಂಪಿ ಜಂಟಿ ಆಯುಕ್ತ ರಾಮಕೃಷ್ಣ, ಬೊಮ್ಮನಹಳ್ಳಿ ವಲಯ ಆರೋಗ್ಯ ವೈದ್ಯಾಧಿಕಾರಿ ನಾಗೇಂದ್ರ, ಕಾರ್ಯಪಾಲಕ ಎಂಜಿನಿಯರ್ ಶೇಷಾದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ:</strong> ಹಾಸಿಗೆ ಕೊರತೆ ನೀಗಿಸಲು ಎಚ್ಎಸ್ಆರ್ ಬಡಾವಣೆಯಲ್ಲಿರುವ ಸರ್ಕಾರಿ ವಿದ್ಯಾರ್ಥಿ ನಿಲಯವನ್ನು ಆಮ್ಲಜನಕ ಪೂರೈಕೆ ಸಹಿತ 150 ಹಾಸಿಗೆಗಳ ಕೊರೊನಾ ಆರೈಕೆ ಕೇಂದ್ರ ತೆರೆಯಲಾಗಿದೆ.</p>.<p>ರೋಗಿಗಳಿಗೆ ಉಚಿತ ಔಷಧ, ಊಟದ ವ್ಯವಸ್ಥೆ ಮಾಡಲಾಗಿದೆ. ಆಮ್ಲಜನಕ ಕಾನ್ಸನ್ಟ್ರೇಟರ್ ಗಳು ಹಾಗು ತುರ್ತು ಸಂದರ್ಭಕ್ಕೆ ತ್ವರಿತವಾಗಿ ಆ್ಯಂಬುಲೆನ್ಸ್ ಸೇವೆಯನ್ನು ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.</p>.<p>ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ 'ಸೋಂಕಿತರು ಆಸ್ಪತ್ರೆಗೆ ಬಂದಾಗ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಕಲ ಸೌಲಭ್ಯವನ್ನು ಒದಗಿಸಲಾಗಿದೆ. ಇದರ ಜತೆ ಈಗಾಗಲೇ ಸಿಂಗಸಂದ್ರದಲ್ಲಿ 50 ಹಾಸಿಗೆ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದರು.</p>.<p>‘ಹೊಂಗಸಂದ್ರದಲ್ಲಿ 100 ಹಾಸಿಗೆ, ಅರಕೆರೆ, ಪುಟ್ಟೇನಹಳ್ಳಿಯಲ್ಲೂ ಇದೇ ರೀತಿ ಆರೈಕೆ ತೆರೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಮೂರು ದಿನದಲ್ಲಿ ಒಟ್ಟು 500 ಹಾಸಿಗೆ ವ್ಯವಸ್ಥೆಯನ್ನು ಮಾಡಲಾಗುವುದು' ಎಂದರು.</p>.<p>ಬೊಮ್ಮನಹಳ್ಳಿ ಬಿಬಿಎಂಪಿ ಜಂಟಿ ಆಯುಕ್ತ ರಾಮಕೃಷ್ಣ, ಬೊಮ್ಮನಹಳ್ಳಿ ವಲಯ ಆರೋಗ್ಯ ವೈದ್ಯಾಧಿಕಾರಿ ನಾಗೇಂದ್ರ, ಕಾರ್ಯಪಾಲಕ ಎಂಜಿನಿಯರ್ ಶೇಷಾದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>