<p><strong>ಯಲಹಂಕ:</strong>ಗ್ರಾಮಗಳಿಂದ ಹರಿದು ಬರುವ ತ್ಯಾಜ್ಯ ನೀರು ಕೆರೆಗೆ ಸೇರಬಾರದೆಂಬ ಉದ್ದೇಶದಿಂದ ಗ್ರಾಮಪಂಚಾಯಿತಿ ಅನುದಾನದಲ್ಲಿ ₹1 ಕೋಟಿ ವೆಚ್ಚದಲ್ಲಿ ಕೋಡಗಲಹಟ್ಟಿ ಕೆರೆ ಪಕ್ಕದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುವುದು ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.</p>.<p>ಹುಣಸಮಾರನಹಳ್ಳಿಯ ಭಾರತಿನಗರದಲ್ಲಿ ₹15 ಲಕ್ಷ ವೆಚ್ಚದಲ್ಲಿ ಪ್ರತ್ಯೇಕ ಕೊಳವೆಮಾರ್ಗ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿಯವರೆಗೆ ಈ ಗ್ರಾಮಗಳ ಕೊಳಚೆ ನೀರು ಹರಿದು ಹೋಗಲು ಪ್ರತ್ಯೇಕ ಕಾಲುವೆಯಿಲ್ಲದೆ ತ್ಯಾಜ್ಯ ಕಟ್ಟಿಕೊಂಡು ದುರ್ವಾಸನೆ ಬೀರುತ್ತಿತ್ತು. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.</p>.<p>ಭಾರತೀಯ ವಾಯುನೆಲೆಯ ಡೆಪ್ಯುಟಿ ಕೇಡರ್ ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸಜಿತಾ ಅಶೋಕನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಎಂ.ಜಯಗೋಪಾಲಗೌಡ, ದಾನೇಗೌಡ, ಎಚ್.ಪಿ.ನಾರಾಯಣಸ್ವಾಮಿ, ಶರಣ್ ಕುಮಾರ್, ದಯಾನಂದ್, ಹರೀಶ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong>ಗ್ರಾಮಗಳಿಂದ ಹರಿದು ಬರುವ ತ್ಯಾಜ್ಯ ನೀರು ಕೆರೆಗೆ ಸೇರಬಾರದೆಂಬ ಉದ್ದೇಶದಿಂದ ಗ್ರಾಮಪಂಚಾಯಿತಿ ಅನುದಾನದಲ್ಲಿ ₹1 ಕೋಟಿ ವೆಚ್ಚದಲ್ಲಿ ಕೋಡಗಲಹಟ್ಟಿ ಕೆರೆ ಪಕ್ಕದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುವುದು ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.</p>.<p>ಹುಣಸಮಾರನಹಳ್ಳಿಯ ಭಾರತಿನಗರದಲ್ಲಿ ₹15 ಲಕ್ಷ ವೆಚ್ಚದಲ್ಲಿ ಪ್ರತ್ಯೇಕ ಕೊಳವೆಮಾರ್ಗ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿಯವರೆಗೆ ಈ ಗ್ರಾಮಗಳ ಕೊಳಚೆ ನೀರು ಹರಿದು ಹೋಗಲು ಪ್ರತ್ಯೇಕ ಕಾಲುವೆಯಿಲ್ಲದೆ ತ್ಯಾಜ್ಯ ಕಟ್ಟಿಕೊಂಡು ದುರ್ವಾಸನೆ ಬೀರುತ್ತಿತ್ತು. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.</p>.<p>ಭಾರತೀಯ ವಾಯುನೆಲೆಯ ಡೆಪ್ಯುಟಿ ಕೇಡರ್ ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸಜಿತಾ ಅಶೋಕನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಎಂ.ಜಯಗೋಪಾಲಗೌಡ, ದಾನೇಗೌಡ, ಎಚ್.ಪಿ.ನಾರಾಯಣಸ್ವಾಮಿ, ಶರಣ್ ಕುಮಾರ್, ದಯಾನಂದ್, ಹರೀಶ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>