<p><strong>ಬೆಂಗಳೂರು</strong>: ‘ಕರಗ ಉತ್ಸವದ ಅನುದಾನ ಬಿಡುಗಡೆಗೆ ಶೇ 20ರಷ್ಟು ಕಮಿಷನ್ ಕೇಳಲಾಗುತ್ತಿದೆ’ ಎಂದು ಧರ್ಮರಾಯಸ್ವಾಮಿ ದೇವಾಲಯದ ನಿಕಟಪೂರ್ವ ಆಡಳಿತ ಮಂಡಳಿ ಅಧ್ಯಕ್ಷ ಕೆ. ಸತೀಶ್ ಆರೋಪಿಸಿದರು.</p>.<p>‘₹10 ಲಕ್ಷ ಅನುದಾನ ಬಿಡುಗಡೆಗೆ ₹2 ಲಕ್ಷ ಕಮಿಷನ್ ಕೇಳುತ್ತಿದ್ದಾರೆ. ಹೂವಿನ ಅಲಂಕಾರ, ಲೈಟಿಂಗ್ ಸೇರಿದಂತೆ ವಿವಿಧ ಗುತ್ತಿಗೆ ಪಡೆದವರಿಂದ ಮುಜರಾಯಿ ಇಲಾಖೆಯ ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಇಲಾಖೆಯ ಆರು ಅಧಿಕಾರಿಗಳು ಭಾಗಿಯಾಗಿದ್ದು, ಅವರೆಲ್ಲ ಒಂದು ತಂಡವಾಗಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಆರೋಪಿಸಿದರು.</p>.<p>‘ಕಳೆದ ವರ್ಷದ ಕರಗ ಉತ್ಸವ ಮುಗಿದ ಎರಡು ತಿಂಗಳ ನಂತರ ಟೆಂಡರ್ ಕರೆಯುತ್ತಾರೆ. ಕರಗ ಉತ್ಸವದಲ್ಲಿ ಹೂವಿನ ಅಲಂಕಾರ, ವಿದ್ಯುತ್ ಅಲಂಕಾರ ಮಾಡಿದವರಿಗೆ ಹಣ ನೀಡಿಲ್ಲ. ಎಲ್ಲವನ್ನೂ ಮುಚ್ಚಿಟ್ಟು, ಅಧಿಕಾರಿಗಳೇ ಹಣ ಪಡೆದುಕೊಂಡು ಗುತ್ತಿಗೆದಾರರಿಗೆ ಮೋಸ ಮಾಡಿದ್ದಾರೆ. ಕರಗ ಉತ್ಸವಕ್ಕೆ ಬಿಬಿಎಂಪಿ ₹1.5 ಕೋಟಿ ಅನುದಾನ ಮೀಸಲಿಟ್ಟಿದ್ದರೂ ಅದನ್ನು ಪಡೆಯದೆ ₹40 ಲಕ್ಷದಲ್ಲೇ ಕರಗ ನಡೆಸಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಯಾರಿಗೂ ದುಡ್ಡು ಕೊಟ್ಟಿಲ್ಲ’ ಎಂದು ದೂರಿದರು.</p>.<p><strong>ದಾಖಲೆ ಒದಗಿಸಲಿ</strong>: ‘ಕರಗ ಮಹೋತ್ಸವ ವೆಚ್ಚಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಕಮಿಷನ್ ಕೇಳಿದ್ದಾರೆ ಎಂದು ಕೆ. ಸತೀಶ್ ಅವರು ಆರೋಪ ಮಾಡಿದ್ಧಾರೆ. ಈ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸಿದರೆ, ಪರಿಶೀಲಿಸಿ, ಅಕ್ರಮವೆಸಗಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು’ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರಗ ಉತ್ಸವದ ಅನುದಾನ ಬಿಡುಗಡೆಗೆ ಶೇ 20ರಷ್ಟು ಕಮಿಷನ್ ಕೇಳಲಾಗುತ್ತಿದೆ’ ಎಂದು ಧರ್ಮರಾಯಸ್ವಾಮಿ ದೇವಾಲಯದ ನಿಕಟಪೂರ್ವ ಆಡಳಿತ ಮಂಡಳಿ ಅಧ್ಯಕ್ಷ ಕೆ. ಸತೀಶ್ ಆರೋಪಿಸಿದರು.</p>.<p>‘₹10 ಲಕ್ಷ ಅನುದಾನ ಬಿಡುಗಡೆಗೆ ₹2 ಲಕ್ಷ ಕಮಿಷನ್ ಕೇಳುತ್ತಿದ್ದಾರೆ. ಹೂವಿನ ಅಲಂಕಾರ, ಲೈಟಿಂಗ್ ಸೇರಿದಂತೆ ವಿವಿಧ ಗುತ್ತಿಗೆ ಪಡೆದವರಿಂದ ಮುಜರಾಯಿ ಇಲಾಖೆಯ ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಇಲಾಖೆಯ ಆರು ಅಧಿಕಾರಿಗಳು ಭಾಗಿಯಾಗಿದ್ದು, ಅವರೆಲ್ಲ ಒಂದು ತಂಡವಾಗಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಆರೋಪಿಸಿದರು.</p>.<p>‘ಕಳೆದ ವರ್ಷದ ಕರಗ ಉತ್ಸವ ಮುಗಿದ ಎರಡು ತಿಂಗಳ ನಂತರ ಟೆಂಡರ್ ಕರೆಯುತ್ತಾರೆ. ಕರಗ ಉತ್ಸವದಲ್ಲಿ ಹೂವಿನ ಅಲಂಕಾರ, ವಿದ್ಯುತ್ ಅಲಂಕಾರ ಮಾಡಿದವರಿಗೆ ಹಣ ನೀಡಿಲ್ಲ. ಎಲ್ಲವನ್ನೂ ಮುಚ್ಚಿಟ್ಟು, ಅಧಿಕಾರಿಗಳೇ ಹಣ ಪಡೆದುಕೊಂಡು ಗುತ್ತಿಗೆದಾರರಿಗೆ ಮೋಸ ಮಾಡಿದ್ದಾರೆ. ಕರಗ ಉತ್ಸವಕ್ಕೆ ಬಿಬಿಎಂಪಿ ₹1.5 ಕೋಟಿ ಅನುದಾನ ಮೀಸಲಿಟ್ಟಿದ್ದರೂ ಅದನ್ನು ಪಡೆಯದೆ ₹40 ಲಕ್ಷದಲ್ಲೇ ಕರಗ ನಡೆಸಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಯಾರಿಗೂ ದುಡ್ಡು ಕೊಟ್ಟಿಲ್ಲ’ ಎಂದು ದೂರಿದರು.</p>.<p><strong>ದಾಖಲೆ ಒದಗಿಸಲಿ</strong>: ‘ಕರಗ ಮಹೋತ್ಸವ ವೆಚ್ಚಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಕಮಿಷನ್ ಕೇಳಿದ್ದಾರೆ ಎಂದು ಕೆ. ಸತೀಶ್ ಅವರು ಆರೋಪ ಮಾಡಿದ್ಧಾರೆ. ಈ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸಿದರೆ, ಪರಿಶೀಲಿಸಿ, ಅಕ್ರಮವೆಸಗಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು’ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>