ಬೆಂಗಳೂರು: ಕೈಗಾರಿಕಾ ಪ್ರದೇಶಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ವಿತರಿಸಲು ವಿಶೇಷ ಭೂಸ್ವಾಧೀನ ಅಧಿಕಾರಿ ಮತ್ತು ಸಿಬ್ಬಂದಿ, ಮಧ್ಯವರ್ತಿಗಳ ಮೂಲಕ ಭಾರಿ ಕಮಿಷನ್ ಪಡೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಕಚೇರಿಯ ಹಿರಿಯ ಸಹಾಯಕ ಎಲ್. ಶ್ರೀನಿವಾಸ ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ.