<p><strong>ಬೆಂಗಳೂರು:</strong> ಪೂರ್ವಾನುಮತಿ ಪಡೆಯದೆ ಪಾಲಿಕೆಯ ಎ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.</p>.<p>ಪೂರ್ವ ವಲಯದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರನ್ನು ರಸ್ತೆ ಮೂಲಸೌಕರ್ಯ/ಒಎಫ್ಸಿ ವಿಭಾಗದ ಮುಖ್ಯ ಎಂಜಿನಿಯರ್ ಹುದ್ದೆಗೆ ಆಯುಕ್ತರು ಇತ್ತೀಚೆಗೆ ವರ್ಗಾವಣೆ ಮಾಡಿದ್ದರು. ಪ್ರಹ್ಲಾದ್ ಅವರಿಗೆ ರಾಜಕಾಲುವೆ ವಿಭಾಗದ ಹೆಚ್ಚುವರಿ ಹೊಣೆಯನ್ನೂ ಮುಂದುವರಿಸಿದ್ದರು.</p>.<p>’ಗ್ರೂಪ್ ಎ ವೃಂದದ ಅಧಿಕಾರಿಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೆಯೇ, ಪಾಲಿಕೆಯ ಹಂತದಲ್ಲೇ ವರ್ಗಾಯಿಸಿದ್ದು ಸರಿಯಲ್ಲ. ಭವಿಷ್ಯದಲ್ಲಿ ಇಂತಹ ಸೇವಾ ವಿಷಯಗಳನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸಬೇಕು‘ ಎಂದು ನಗರಾಭಿವೃದ್ಧಿ ಇಲಾಖೆಯು ಆಯುಕ್ತರಿಗೆ ನಿರ್ದೇಶನ ನೀಡಿದೆ.</p>.<p>ಈ ಹಿಂದೆ ಬಿಬಿಎಂಪಿಯ ಎಲ್ಲ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿ ಯನ್ನು ನೇಮಿಸಿಕೊಳ್ಳುವ ಅಧಿಕಾರ ಆಯುಕ್ತರಿಗೆ ಮಾತ್ರ ಇತ್ತು. ‘ಬಿಬಿಎಂಪಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಾಮಾನ್ಯ ವೃಂದ ಮತ್ತು ನೇಮಕಾತಿ ನಿಯಮ– 2020’ ಉಲ್ಲಂಘಿಸಿ ಆಯುಕ್ತರು ಈ ಹಿಂದಿನಂತೆ ಅಧಿಕಾರ ಚಲಾಯಿಸಿ ಆಯುಕ್ತರು ವರ್ಗಾವಣೆ ಮಾಡಿದ್ದರು.</p>.<p>ಬಿಬಿಎಂಪಿಯ ವೃಂದ ಮತ್ತು ನೇಮಕಾತಿಯ ಹೊಸ ನಿಯಮದ ಪ್ರಕಾರ, ಎ ಗುಂಪಿನ ಅಧಿಕಾರಿಗಳನ್ನು ಹಾಗೂ ₹ 74 ಸಾವಿರಕ್ಕಿಂತ ಹೆಚ್ಚು ಮೂಲವೇತನ ಹೊಂದಿರುವ ಅಧಿಕಾರಿಗಳನ್ನು ಸರ್ಕಾರವೇ (ನಗರಾಭಿವೃದ್ಧಿ ಇಲಾಖೆ) ನೇಮಿಸಬೇಕಿದೆ. ಬಿ ಮತ್ತು ಸಿ ಗುಂಪಿನ ಅಧಿಕಾರಿಗಳನ್ನು ಹಾಗೂ ಡಿ ಗುಂಪಿನ ಸಿಬ್ಬಂದಿಯನ್ನು ಮಾತ್ರ ಆಯುಕ್ತರು ಅಥವಾ ಅವರು ಸೂಚಿಸಿದ ಅಧಿಕಾರಿ ನೇಮಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೂರ್ವಾನುಮತಿ ಪಡೆಯದೆ ಪಾಲಿಕೆಯ ಎ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.</p>.<p>ಪೂರ್ವ ವಲಯದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರನ್ನು ರಸ್ತೆ ಮೂಲಸೌಕರ್ಯ/ಒಎಫ್ಸಿ ವಿಭಾಗದ ಮುಖ್ಯ ಎಂಜಿನಿಯರ್ ಹುದ್ದೆಗೆ ಆಯುಕ್ತರು ಇತ್ತೀಚೆಗೆ ವರ್ಗಾವಣೆ ಮಾಡಿದ್ದರು. ಪ್ರಹ್ಲಾದ್ ಅವರಿಗೆ ರಾಜಕಾಲುವೆ ವಿಭಾಗದ ಹೆಚ್ಚುವರಿ ಹೊಣೆಯನ್ನೂ ಮುಂದುವರಿಸಿದ್ದರು.</p>.<p>’ಗ್ರೂಪ್ ಎ ವೃಂದದ ಅಧಿಕಾರಿಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೆಯೇ, ಪಾಲಿಕೆಯ ಹಂತದಲ್ಲೇ ವರ್ಗಾಯಿಸಿದ್ದು ಸರಿಯಲ್ಲ. ಭವಿಷ್ಯದಲ್ಲಿ ಇಂತಹ ಸೇವಾ ವಿಷಯಗಳನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸಬೇಕು‘ ಎಂದು ನಗರಾಭಿವೃದ್ಧಿ ಇಲಾಖೆಯು ಆಯುಕ್ತರಿಗೆ ನಿರ್ದೇಶನ ನೀಡಿದೆ.</p>.<p>ಈ ಹಿಂದೆ ಬಿಬಿಎಂಪಿಯ ಎಲ್ಲ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿ ಯನ್ನು ನೇಮಿಸಿಕೊಳ್ಳುವ ಅಧಿಕಾರ ಆಯುಕ್ತರಿಗೆ ಮಾತ್ರ ಇತ್ತು. ‘ಬಿಬಿಎಂಪಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಾಮಾನ್ಯ ವೃಂದ ಮತ್ತು ನೇಮಕಾತಿ ನಿಯಮ– 2020’ ಉಲ್ಲಂಘಿಸಿ ಆಯುಕ್ತರು ಈ ಹಿಂದಿನಂತೆ ಅಧಿಕಾರ ಚಲಾಯಿಸಿ ಆಯುಕ್ತರು ವರ್ಗಾವಣೆ ಮಾಡಿದ್ದರು.</p>.<p>ಬಿಬಿಎಂಪಿಯ ವೃಂದ ಮತ್ತು ನೇಮಕಾತಿಯ ಹೊಸ ನಿಯಮದ ಪ್ರಕಾರ, ಎ ಗುಂಪಿನ ಅಧಿಕಾರಿಗಳನ್ನು ಹಾಗೂ ₹ 74 ಸಾವಿರಕ್ಕಿಂತ ಹೆಚ್ಚು ಮೂಲವೇತನ ಹೊಂದಿರುವ ಅಧಿಕಾರಿಗಳನ್ನು ಸರ್ಕಾರವೇ (ನಗರಾಭಿವೃದ್ಧಿ ಇಲಾಖೆ) ನೇಮಿಸಬೇಕಿದೆ. ಬಿ ಮತ್ತು ಸಿ ಗುಂಪಿನ ಅಧಿಕಾರಿಗಳನ್ನು ಹಾಗೂ ಡಿ ಗುಂಪಿನ ಸಿಬ್ಬಂದಿಯನ್ನು ಮಾತ್ರ ಆಯುಕ್ತರು ಅಥವಾ ಅವರು ಸೂಚಿಸಿದ ಅಧಿಕಾರಿ ನೇಮಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>