ಕಮಿಷನರ್ ಕಮಲ್ ಪಂತ್ ಅವರು ಏಪ್ರಿಲ್ 17ರಂದು ಬೆಳಿಗ್ಗೆ 11ರಿಂದ 12 ಗಂಟೆವರೆಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ‘ಬೆಂಗಳೂರು ಸಿಟಿ ಪೊಲೀಸ್’ ಖಾತೆಯಲ್ಲಿ ನೇರಪ್ರಸಾರದಲ್ಲಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಪೊಲೀಸರು, ಇತ್ತೀಚೆಗೆ ಹೆಚ್ಚು ಸುದ್ದಿಯಾದ ರಾಹುಲ್ ದ್ರಾವಿಡ್ ಕಾಣಿಸಿಕೊಂಡಿದ್ದ ಜಾಹೀರಾತು ಬಳಸಿಕೊಳ್ಳುತ್ತಿದ್ದಾರೆ.