ಕನ್ನಡ ಚಂದ್ರ ಪ್ರಶಸ್ತಿ ಪ್ರದಾನ ಸಮಿತಿ, ಸಪ್ನ ಬುಕ್ ಹೌಸ್ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ರಾ.ನಂ. ಚಂದ್ರಶೇಖರ–70 ಕಾರ್ಯಕ್ರಮದಲ್ಲಿ ‘ಕನ್ನಡ ಡಿಂಡಿಮ’ ಪರಿಷ್ಕೃತ ಆವೃತ್ತಿಯನ್ನು ಬಿಡುಗಡೆ ಮಾಡಿ, ರಾ. ಪ್ರಭುಶಂಕರ ಹಾಗೂ ಭಾರ್ಗವಿ ಹೇಮಂತ್ ಅವರಿಗೆ ‘ಕನ್ನಡ ಚಂದ್ರ ಪ್ರಶಸ್ತಿ’ ಪ್ರದಾನ ಮಾಡಿದರು. ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.