<p><strong>ಬೆಂಗಳೂರು:</strong> ‘ಅಲೆಮಾರಿ ಸಮುದಾಯದವರಿಗೆ ವಸತಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.</p>.<p>ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ಆಶ್ರಯದಲ್ಲಿ ಗಾಂಧಿಭವನದಲ್ಲಿ ‘ಅಲೆಮಾರಿಗಳ ಸಮಸ್ಯೆ, ಸವಾಲುಗಳು ಹಾಗೂ ಪರಿಹಾರೋಪಾಯಗಳು’ ಸಮಾಲೋಚನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಲೆಮಾರಿ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಇದಕ್ಕೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಿದೆ’ ಎಂದು ಅವರು ತಿಳಿಸಿದರು.</p>.<p>‘ಉಪ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ್ದೆ. ಸಮುದಾಯದ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಾಗುವುದು. ಸಮುದಾಯದ ಯಾವ ಮಗುವೂ ಶಾಲೆಯಿಂದ ಹೊರಕ್ಕೆ ಉಳಿಯಬಾರದು’ ಎಂದರು.</p>.<p>ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ‘ಪ್ರಬಲ ಹಾಗೂ ಮುಂದುವರಿದ ಜಾತಿಗಳು ಮೀಸಲಾತಿ ಪಟ್ಟಿಯೊಳಗೆ ಸೇರಿ, ಸೌಲಭ್ಯಗಳನ್ನು ಪಡೆಯುತ್ತಿರುವುದು ವಿಷಾದನೀಯ. ಅನರ್ಹರು ಮೀಸಲಾತಿ ಸೌಲಭ್ಯ ಪಡೆದರೆ ಕಳ್ಳತನ ಮಾಡಿದಷ್ಟೇ ಅಪರಾಧ. ಸರ್ಕಾರಗಳು ಒತ್ತಡಕ್ಕೆ ಮಣಿಯದೇ ಅರ್ಹರಿಗೆ ಮಾತ್ರ ಮೀಸಲಾತಿ ಸೌಲಭ್ಯ ನೀಡಬೇಕು’ ಎಂದರು.</p>.<p>‘ಕರ್ನಾಟಕದಲ್ಲೂ ಕೆಲವು ಮುಂದುವರಿದ ಜಾತಿಗಳು ಮೀಸಲಾತಿ ಪಟ್ಟಿಯೊಳಗೆ ಸೇರ್ಪಡೆಯಾಗಿರುವುದು ದುರ್ದೈವ. ಇದರಿಂದ ಅರ್ಹರು ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತ್ತಾರೆ. ಅರ್ಹರೆಲ್ಲರೂ ಮೀಸಲಾತಿ ಪಟ್ಟಿಯೊಳಗೆ ಬರಬೇಕು’ ಎಂದರು.</p>.<p>‘ಅಲೆಮಾರಿಗಳ ಅಭಿವೃದ್ಧಿ ಕೋಶಕ್ಕೆ ₹106 ಕೋಟಿ ನೀಡಲಾಗಿದೆ’ ಎಂದು ತಿಳಿಸಿದರು.</p>.<p><strong>ಅಲೆಮಾರಿ ಸಮುದಾಯದ ಬೇಡಿಕೆಗಳು</strong></p>.<p>*ಅಲೆಮಾರಿ ಅಧ್ಯಯನ ಕೇಂದ್ರ ಸ್ಥಾಪನೆ</p>.<p>*ಅಲೆಮಾರಿ ಅಕಾಡೆಮಿ ಆರಂಭ</p>.<p>*ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ</p>.<p>*ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಸಾಲ ಸೌಲಭ್ಯ</p>.<p>*ಸಮುದಾಯಕ್ಕೆ ಕೃಷಿ ಯೋಗ್ಯ ಜಮೀನು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಲೆಮಾರಿ ಸಮುದಾಯದವರಿಗೆ ವಸತಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.</p>.<p>ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ಆಶ್ರಯದಲ್ಲಿ ಗಾಂಧಿಭವನದಲ್ಲಿ ‘ಅಲೆಮಾರಿಗಳ ಸಮಸ್ಯೆ, ಸವಾಲುಗಳು ಹಾಗೂ ಪರಿಹಾರೋಪಾಯಗಳು’ ಸಮಾಲೋಚನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಲೆಮಾರಿ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಇದಕ್ಕೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಿದೆ’ ಎಂದು ಅವರು ತಿಳಿಸಿದರು.</p>.<p>‘ಉಪ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ್ದೆ. ಸಮುದಾಯದ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಾಗುವುದು. ಸಮುದಾಯದ ಯಾವ ಮಗುವೂ ಶಾಲೆಯಿಂದ ಹೊರಕ್ಕೆ ಉಳಿಯಬಾರದು’ ಎಂದರು.</p>.<p>ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ‘ಪ್ರಬಲ ಹಾಗೂ ಮುಂದುವರಿದ ಜಾತಿಗಳು ಮೀಸಲಾತಿ ಪಟ್ಟಿಯೊಳಗೆ ಸೇರಿ, ಸೌಲಭ್ಯಗಳನ್ನು ಪಡೆಯುತ್ತಿರುವುದು ವಿಷಾದನೀಯ. ಅನರ್ಹರು ಮೀಸಲಾತಿ ಸೌಲಭ್ಯ ಪಡೆದರೆ ಕಳ್ಳತನ ಮಾಡಿದಷ್ಟೇ ಅಪರಾಧ. ಸರ್ಕಾರಗಳು ಒತ್ತಡಕ್ಕೆ ಮಣಿಯದೇ ಅರ್ಹರಿಗೆ ಮಾತ್ರ ಮೀಸಲಾತಿ ಸೌಲಭ್ಯ ನೀಡಬೇಕು’ ಎಂದರು.</p>.<p>‘ಕರ್ನಾಟಕದಲ್ಲೂ ಕೆಲವು ಮುಂದುವರಿದ ಜಾತಿಗಳು ಮೀಸಲಾತಿ ಪಟ್ಟಿಯೊಳಗೆ ಸೇರ್ಪಡೆಯಾಗಿರುವುದು ದುರ್ದೈವ. ಇದರಿಂದ ಅರ್ಹರು ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತ್ತಾರೆ. ಅರ್ಹರೆಲ್ಲರೂ ಮೀಸಲಾತಿ ಪಟ್ಟಿಯೊಳಗೆ ಬರಬೇಕು’ ಎಂದರು.</p>.<p>‘ಅಲೆಮಾರಿಗಳ ಅಭಿವೃದ್ಧಿ ಕೋಶಕ್ಕೆ ₹106 ಕೋಟಿ ನೀಡಲಾಗಿದೆ’ ಎಂದು ತಿಳಿಸಿದರು.</p>.<p><strong>ಅಲೆಮಾರಿ ಸಮುದಾಯದ ಬೇಡಿಕೆಗಳು</strong></p>.<p>*ಅಲೆಮಾರಿ ಅಧ್ಯಯನ ಕೇಂದ್ರ ಸ್ಥಾಪನೆ</p>.<p>*ಅಲೆಮಾರಿ ಅಕಾಡೆಮಿ ಆರಂಭ</p>.<p>*ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ</p>.<p>*ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಸಾಲ ಸೌಲಭ್ಯ</p>.<p>*ಸಮುದಾಯಕ್ಕೆ ಕೃಷಿ ಯೋಗ್ಯ ಜಮೀನು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>