‘ಜನ ಸೇವೆಯೇ ನನ್ನ ಕಾಯಕ, ನನ್ನ ಜೀವನವನ್ನು ನನ್ನ ಮತ ಕ್ಷೇತ್ರವಾದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಾಗಿಡುತ್ತೇನೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗಬಾರದು’ ಎಂದಿರುವ ಅವರು ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಅಭಿಮಾನಿಗಳಿಗೆ ಹಾಗೂ ಕಾರ್ಯರ್ತರಲ್ಲಿ ಅವರು ಮನವಿ ಮಾಡಿದ್ದಾರೆ.