<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರಕ್ಕೆ ಪರ್ಯಾಯವಾಗಿ ಯಾವುದೇ ರೀತಿಯ ಸಮಾನಾಂತರ ಆಡಳಿತ ನಡೆಯಲು ಅವಕಾಶ ಕಲ್ಪಿಸಬಾರದು ಮತ್ತು ಕೋಮು ಹಿಂಸಾಚಾರಗಳಲ್ಲಿ ತೊಡಗಿರುವ ಎಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಜನವರಿಯಿಂದ ಸೆಪ್ಟೆಂಬರ್ವರೆಗೆ ನಡೆದ ಕೋಮು ದ್ವೇಷದ ಅಪರಾಧಗಳ ಕುರಿತು ವರದಿ ಪ್ರಕಟಿಸಿರುವ ಈ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಈ ಒತ್ತಾಯ ಮಾಡಿವೆ.</p>.<p>‘ಮತೀಯ ಗೂಂಡಾಗಿರಿಯಿಂದ ದ್ವೇಷ ಅಪರಾಧಗಳವರೆಗೆ: ಅಂಬೇಡ್ಕರ್ ಅವರ ಭ್ರಾತೃತ್ವದ ಕನಸಿನ ಮೇಲೆ ದಾಳಿ’ ಶೀರ್ಷಿಕೆ ಅಡಿಯಲ್ಲಿ ಪ್ರಕಟಿಸಲಾದ ಈ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.</p>.<p>ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(ಪಿಯುಸಿಎಲ್), ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ), ಎಲ್ ಇಂಡಿಯಾ ಪೀಪಲ್ಸ್ ಫೋರಂ (ಎಐಪಿಎಫ್) ಮತ್ತು ಗೌರಿಲಂಕೇಶ್ ನ್ಯೂಸ್ ಡಾಟ್ ಕಾಮ್ ಈ ವರದಿ ಪ್ರಕಟಿಸಿವೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆಗಳ ಬಗ್ಗೆ ವರದಿಯಲ್ಲಿ ವಿಸ್ತೃತವಾಗಿ ವಿವರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು ಸಹ ಉಲ್ಲೇಖಿಸಲಾಗಿದೆ.</p>.<p>‘ಅಂತರ್ಜಾತಿ ಅಥವಾ ಅಂತರಧರ್ಮಿಯರ ದಂಪತಿಗಳಿಗೆ ಯಾರಿಂದಲೂ ಕಿರುಕುಳ, ಬೆದರಿಕೆಗಳು ಅಥವಾ ಹಿಂಸಾಚಾರದ ಕೃತ್ಯಗಳಿಗೆ ಒಳಗಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಯಾವುದೇ ದುಷ್ಕೃತ್ಯಗಳನ್ನು ಕೈಗೊಳ್ಳುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಮತೀಯ ಗೂಂಡಾಗಿರಿಯ ಎಲ್ಲ ಪ್ರಕರಣಗಳಲ್ಲಿ ತಕ್ಷಣವೇ ಎಫ್ಐಆರ್ ದಾಖಲಿಸಬೇಕು’ ಎಂದು ಒತ್ತಾಯಿಸಲಾಗಿದೆ.</p>.<p><strong>ಜಿಲ್ಲೆಯಲ್ಲಿ ಗುರುತಿಸಲಾದ ವಿವಿಧ ಘಟನೆಗಳು</strong><br />* ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು<br />* ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು<br />* ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರ<br />* ಗೋವಿನ ಹೆಸರಿನಲ್ಲಿ ದಾಳಿಗಳು<br />* ಧಾರ್ಮಿಕ ಸ್ವಾತಂತ್ರ್ಯವನ್ನು ನಿಯಂತ್ರಿಸುವುದು<br />* ದ್ವೇಷ ಬಿತ್ತುವ ಭಾಷಣಗಳನ್ನು ಹರಡುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರಕ್ಕೆ ಪರ್ಯಾಯವಾಗಿ ಯಾವುದೇ ರೀತಿಯ ಸಮಾನಾಂತರ ಆಡಳಿತ ನಡೆಯಲು ಅವಕಾಶ ಕಲ್ಪಿಸಬಾರದು ಮತ್ತು ಕೋಮು ಹಿಂಸಾಚಾರಗಳಲ್ಲಿ ತೊಡಗಿರುವ ಎಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಜನವರಿಯಿಂದ ಸೆಪ್ಟೆಂಬರ್ವರೆಗೆ ನಡೆದ ಕೋಮು ದ್ವೇಷದ ಅಪರಾಧಗಳ ಕುರಿತು ವರದಿ ಪ್ರಕಟಿಸಿರುವ ಈ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಈ ಒತ್ತಾಯ ಮಾಡಿವೆ.</p>.<p>‘ಮತೀಯ ಗೂಂಡಾಗಿರಿಯಿಂದ ದ್ವೇಷ ಅಪರಾಧಗಳವರೆಗೆ: ಅಂಬೇಡ್ಕರ್ ಅವರ ಭ್ರಾತೃತ್ವದ ಕನಸಿನ ಮೇಲೆ ದಾಳಿ’ ಶೀರ್ಷಿಕೆ ಅಡಿಯಲ್ಲಿ ಪ್ರಕಟಿಸಲಾದ ಈ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.</p>.<p>ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(ಪಿಯುಸಿಎಲ್), ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ), ಎಲ್ ಇಂಡಿಯಾ ಪೀಪಲ್ಸ್ ಫೋರಂ (ಎಐಪಿಎಫ್) ಮತ್ತು ಗೌರಿಲಂಕೇಶ್ ನ್ಯೂಸ್ ಡಾಟ್ ಕಾಮ್ ಈ ವರದಿ ಪ್ರಕಟಿಸಿವೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆಗಳ ಬಗ್ಗೆ ವರದಿಯಲ್ಲಿ ವಿಸ್ತೃತವಾಗಿ ವಿವರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು ಸಹ ಉಲ್ಲೇಖಿಸಲಾಗಿದೆ.</p>.<p>‘ಅಂತರ್ಜಾತಿ ಅಥವಾ ಅಂತರಧರ್ಮಿಯರ ದಂಪತಿಗಳಿಗೆ ಯಾರಿಂದಲೂ ಕಿರುಕುಳ, ಬೆದರಿಕೆಗಳು ಅಥವಾ ಹಿಂಸಾಚಾರದ ಕೃತ್ಯಗಳಿಗೆ ಒಳಗಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಯಾವುದೇ ದುಷ್ಕೃತ್ಯಗಳನ್ನು ಕೈಗೊಳ್ಳುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಮತೀಯ ಗೂಂಡಾಗಿರಿಯ ಎಲ್ಲ ಪ್ರಕರಣಗಳಲ್ಲಿ ತಕ್ಷಣವೇ ಎಫ್ಐಆರ್ ದಾಖಲಿಸಬೇಕು’ ಎಂದು ಒತ್ತಾಯಿಸಲಾಗಿದೆ.</p>.<p><strong>ಜಿಲ್ಲೆಯಲ್ಲಿ ಗುರುತಿಸಲಾದ ವಿವಿಧ ಘಟನೆಗಳು</strong><br />* ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು<br />* ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು<br />* ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರ<br />* ಗೋವಿನ ಹೆಸರಿನಲ್ಲಿ ದಾಳಿಗಳು<br />* ಧಾರ್ಮಿಕ ಸ್ವಾತಂತ್ರ್ಯವನ್ನು ನಿಯಂತ್ರಿಸುವುದು<br />* ದ್ವೇಷ ಬಿತ್ತುವ ಭಾಷಣಗಳನ್ನು ಹರಡುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>