ಡಿ.ಜೆ.ಹಳ್ಳಿಯ ರೋಷನ್ ನಗರದ ನಿವಾಸಿಯಾಗಿದ್ದ ಖಾಲೀದ್, ಅಯಾಜ್ ಹಾಗೂ ಆಪ್ನಾನ್ ಜೊತೆಗೂಡಿ ಎಸ್ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿದ್ದ ಎಂದು ಆರೋಪಿಸಲಾಗಿದೆ.ಜೆಡಿಎಸ್ ಮುಖಂಡ ವಾಜಿದ್ ಜೊತೆಗೆ ಖಾಲೀದ್ ಸಂಪರ್ಕದಲ್ಲಿದ್ದ. ಹಲವು ರಾಜಕೀಯ ನಾಯಕರ ಜೊತೆಗೂ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆ ನಡೆಸಲು ಕಿಡಿಗೇಡಿಗಳಿಗೆ ಪ್ರಚೋದನೆ ಹಾಗೂ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿ, ಸಾರ್ವಜನಿಕರಿಗೆ ಬೆದರಿಕೆ ಹಾಕಿರುವ ಆರೋಪದಡಿ ಮುಕ್ಬುಲ್ನನ್ನು ಡಿ.ಜೆ.ಹಳ್ಳಿ ಪೊಲೀಸರು ಗುರುವಾರ ಬಂಧಿಸಿದರು.