ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಪ್ರಮುಖ ಆರೋಪಿ ಖಾಲೀದ್ ಬಂಧನ

Last Updated 20 ಆಗಸ್ಟ್ 2020, 20:55 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎಸ್‍ಡಿಪಿಐ ಕಾರ್ಯಕರ್ತ ಖಾಲೀದ್ ಮುಜಾಮಿಲ್‍ನನ್ನು ಡಿ.ಜೆ.ಹಳ್ಳಿ ಪೊಲೀಸರುಬುಧವಾರ ತಡರಾತ್ರಿ ಬಂಧಿಸಿದರು.

ಡಿ.ಜೆ.ಹಳ್ಳಿಯ ರೋಷನ್ ನಗರದ ನಿವಾಸಿಯಾಗಿದ್ದ ಖಾಲೀದ್, ಅಯಾಜ್ ಹಾಗೂ ಆಪ್ನಾನ್ ಜೊತೆಗೂಡಿ ಎಸ್‍ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿದ್ದ ಎಂದು ಆರೋಪಿಸಲಾಗಿದೆ.ಜೆಡಿಎಸ್ ಮುಖಂಡ ವಾಜಿದ್ ಜೊತೆಗೆ ಖಾಲೀದ್ ಸಂಪರ್ಕದಲ್ಲಿದ್ದ. ಹಲವು ರಾಜಕೀಯ ನಾಯಕರ ಜೊತೆಗೂ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆ ನಡೆಸಲು ಕಿಡಿಗೇಡಿಗಳಿಗೆ ಪ್ರಚೋದನೆ ಹಾಗೂ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿ, ಸಾರ್ವಜನಿಕರಿಗೆ ಬೆದರಿಕೆ ಹಾಕಿರುವ ಆರೋಪದಡಿ ಮುಕ್ಬುಲ್‍ನನ್ನು ಡಿ.ಜೆ.ಹಳ್ಳಿ ಪೊಲೀಸರು ಗುರುವಾರ ಬಂಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT