<p><strong>ಕೆ.ಆರ್.ಪುರ: ‘</strong>ಯಾವುದೇ ಸಮುದಾಯ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಆ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗಬೇಕು’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.</p>.<p>ಕೆ.ಆರ್.ಪುರದಲ್ಲಿ ಶ್ರೀ ವಾಲ್ಮೀಕಿ ಜನಕಲ್ಯಾಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಾಲ್ಮೀಕಿ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಸಮುದಾಯ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು’ ಎಂದರು.</p>.<p>‘ಸಹಕಾರ ಬ್ಯಾಂಕ್ ಸ್ಥಾಪಿಸುವುದು ಸುಲಭ. ಆದರೆ, ಅದನ್ನು ಮುನ್ನಡೆಸಿಕೊಂಡು ಹೋಗುವುದೇ ದೊಡ್ಡ ಸವಾಲು’ ಎಂದು ಹೇಳಿದರು. </p>.<p>ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ‘ಒಳ್ಳೆಯ ಉದ್ದೇಶಕ್ಕಾಗಿ ಸಹಕಾರ ಸಂಘ ಸ್ಥಾಪನೆ ಮಾಡಿದ್ದೀರಿ. ಈ ಸಹಕಾರ ಬೆಂಗಳೂರಿಗೆ ಸೀಮಿತವಾಗದೆ, ಉತ್ತರ ಕರ್ನಾಟಕಕ್ಕೂ ವಿಸ್ತರಣೆಯಾಗಲಿ. ಆ ಭಾಗದ ಜನರಿಗೆ ಸಹಕಾರ ಸಂಘದ ಲಾಭ ಸಿಗಲಿ’ ಎಂದರು.</p>.<p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬೈರತಿ ಬಸವರಾಜ, ಸೊಸೈಟಿ ಉಪಾಧ್ಯಕ್ಷ ಅರ್ಜುನ್ ನಾಗೇಂದ್ರ, ಎಲ್.ಮುನಿಸ್ವಾಮಿ, ಜಿ.ಕೆ.ನಾಗೇಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ: ‘</strong>ಯಾವುದೇ ಸಮುದಾಯ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಆ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗಬೇಕು’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.</p>.<p>ಕೆ.ಆರ್.ಪುರದಲ್ಲಿ ಶ್ರೀ ವಾಲ್ಮೀಕಿ ಜನಕಲ್ಯಾಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಾಲ್ಮೀಕಿ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಸಮುದಾಯ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು’ ಎಂದರು.</p>.<p>‘ಸಹಕಾರ ಬ್ಯಾಂಕ್ ಸ್ಥಾಪಿಸುವುದು ಸುಲಭ. ಆದರೆ, ಅದನ್ನು ಮುನ್ನಡೆಸಿಕೊಂಡು ಹೋಗುವುದೇ ದೊಡ್ಡ ಸವಾಲು’ ಎಂದು ಹೇಳಿದರು. </p>.<p>ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ‘ಒಳ್ಳೆಯ ಉದ್ದೇಶಕ್ಕಾಗಿ ಸಹಕಾರ ಸಂಘ ಸ್ಥಾಪನೆ ಮಾಡಿದ್ದೀರಿ. ಈ ಸಹಕಾರ ಬೆಂಗಳೂರಿಗೆ ಸೀಮಿತವಾಗದೆ, ಉತ್ತರ ಕರ್ನಾಟಕಕ್ಕೂ ವಿಸ್ತರಣೆಯಾಗಲಿ. ಆ ಭಾಗದ ಜನರಿಗೆ ಸಹಕಾರ ಸಂಘದ ಲಾಭ ಸಿಗಲಿ’ ಎಂದರು.</p>.<p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬೈರತಿ ಬಸವರಾಜ, ಸೊಸೈಟಿ ಉಪಾಧ್ಯಕ್ಷ ಅರ್ಜುನ್ ನಾಗೇಂದ್ರ, ಎಲ್.ಮುನಿಸ್ವಾಮಿ, ಜಿ.ಕೆ.ನಾಗೇಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>