‘ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ಬಿಟ್ಟಿದ್ದ ಆರೋಪಿ, ವಿಆರ್ಆರ್ ವೆಂಚರ್ಸ್ ಕಂಪನಿ ತೆರೆದಿದ್ದ. ಪರಿಚಯಸ್ಥರಾದ ರಾಮಕೃಷ್ಣ, ಸಂತೋಷ್ ಕುಮಾರ್ ಮತ್ತು ರಾಜೀವ್ ರಾವ್ ಎಂಬುವರನ್ನು ನಿರ್ದೇಶಕರನ್ನಾಗಿ ಮಾಡಿಕೊಂಡಿದ್ದ. ಅಂತರರಾಷ್ಟ್ರೀಯ ಕಂಪನಿಗಳಿಗೆ ಮಾನವ ಸಂಪನ್ಮೂಲ ಒದಗಿಸುವ ಕಂಪನಿ ತನ್ನದೆಂದು ಹೇಳುತ್ತಿದ್ದ ಆರೋಪಿ, ಜಾಹೀರಾತುಗಳನ್ನು ನೀಡಿ ಆಕಾಂಕ್ಷಿಗಳನ್ನು ಸಂಪರ್ಕಿಸುತ್ತಿದ್ದ’ ಎಂದೂ ತಿಳಿಸಿದರು.