ರಾಜ್ಯ ಸರ್ಕಾರ ತುಂಡು ಗುತ್ತಿಗೆ ನೀಡುವುದನ್ನು ನಿರ್ಬಂಧಿಸಿ 2016ರ ಜೂನ್ 25ರಂದು ಸುತ್ತೋಲೆ ಹೊರಡಿಸಿದೆ. ಇದನ್ನು ಉಲ್ಲಂಘಿಸಿ ತುಂಡು ಗುತ್ತಿಗೆ ನೀಡುವ ಅಧಿಕಾರಿ, ಎಂಜಿನಿಯರ್ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ. ಆದರೆ, ಪಿಡಬ್ಲ್ಯುಡಿಯಲ್ಲಿ ಸುತ್ತೋಲೆ ಉಲ್ಲಂಘಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.