ಬೆಂಗಳೂರು: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಚಯ ನಿರ್ಮಾಣ ಕಂಪನಿಯಿಂದ ₹ 7.40 ಕೋಟಿ ಲಂಚ ಪಡೆದಿರುವ ಆರೋಪದಡಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಶಿಧರ್ ಮರಡಿ ಸೇರಿದಂತೆ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿ ಜನಾಧಿಕಾರ ಸಂಘರ್ಷ ಪರಿಷತ್ ಸದಸ್ಯರು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಶುಕ್ರವಾರ ದೂರು ನೀಡಿದ್ದಾರೆ.