ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ಭ್ರಷ್ಟಾಚಾರ: ಎಸಿಬಿಗೆ ದೂರು

Last Updated 29 ಸೆಪ್ಟೆಂಬರ್ 2020, 7:09 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಸರ್ಕಾರದ ವಿವಿಧ ಕಾಮಗಾರಿಗಳಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಈ ದೂರು ನೀಡಿದ್ದಾರೆ.

'ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಚೇರಿ ಸಿಬ್ಬಂದಿ ಈ ಹಿಂದೆ ಬಿಡಿಎ ಆಯುಕ್ತರಾಗಿದ್ದ ಜಿ.ಎಸ್.ಪ್ರಕಾಶ್ ಅವರೊಂದಿಗೆ ಸೇರಿಕೊಂಡು ಈ ಭ್ರಷ್ಟಾಚಾರ ನಡೆಸಿದ್ದಾರೆ. ಅಪಾರ್ಟ್‍ಮೆಂಟ್ ಸಮುಚ್ಛಯಗಳ ಕಾಮಗಾರಿ ಗುತ್ತಿಗೆದಾರರಿಂದ ಭಾರಿ ಲಂಚ ಪಡೆದಿದ್ದಾರೆ. ಈ ಕುರಿತು ಎಸಿಬಿ ತನಿಖೆ ನಡೆಸಬೇಕು' ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ.

'ಲಂಚವಾಗಿ ಪಡೆದಿರುವ ಹಣವನ್ನು ಅಕ್ರಮ ವರ್ಗಾವಣೆ ಮಾಡಲಾಗಿದ್ದು, ಈ ಕುರಿತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಮಾಡಬೇಕು. ಈ ಸಂದರ್ಭದಲ್ಲಿ ಆದಾಯ ತೆರಿಗೆ ಮತ್ತು ಜಿಎಸ್‍ಟಿ ವಂಚಿಸಿರುವ ಸಾಧ್ಯತೆ ಇರುವುದರಿಂದ ಈ ಬಗ್ಗೆಯೂ ತನಿಖೆಯಾಗಬೇಕೆಂದು ಒತ್ತಾಯಿಸಿ ಆದಾಯ ತೆರಿಗೆ ಇಲಾಖೆಗೆ ದಾಖಲೆಗಳ ಸಮೇತ ದೂರು ದಾಖಲಿಸಿದ್ದೇವೆ' ಎಂದೂ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

‘ಈ ಪ್ರಕರಣದ ಬಗ್ಗೆ ಎಲ್ಲ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೂ ಕಳುಹಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT