ಬೆಂಗಳೂರು: ‘ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಘಟನೆಯಲ್ಲಿ ನನ್ನ ಮನೆಗೆ ಬೆಂಕಿ ಇಟ್ಟ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದೇನೆ. ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಹೈಕಮಾಂಡ್ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.