<p><strong>ಬೆಂಗಳೂರು</strong>: ‘ಸಹಕಾರಿ ಸಂಸ್ಥೆಗಳಲ್ಲಿ ಅಕ್ರಮ, ಕಾನೂನು ಉಲ್ಲಂಘನೆಯ ಆರೋಪದ ದೂರುಗಳು ಹೆಚ್ಚುತ್ತಿವೆ. ಸಹಕಾರ ಸಂಸ್ಥೆಗಳಿಗೆ ಸ್ವಾತಂತ್ರ್ಯ ನೀಡಿದ್ದು ತಪ್ಪಾಯಿತು ಎಂಬ ಭಾವನೆ ಮೂಡುತ್ತಿದೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.</p>.<p>ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಆಶ್ರಯದಲ್ಲಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಹಕಾರಿ ಸಂಸ್ಥೆಗಳ ನೇಮಕಾತಿಯಲ್ಲಿ ಪಾರ್ದರ್ಶಕತೆ ಇಲ್ಲದಿರುವುದು, ಬಡ್ಡಿ ಪ್ರಮಾಣ ಹೆಚ್ಚಳ ಸೇರಿದಂತೆ ಹಲವು ದೂರುಗಳು ಬಂದಿವೆ. ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗದಿದ್ದರೆ ಸಂಸ್ಥೆಗಳು ಉಳಿಯುವುದಿಲ್ಲ’ ಎಂದರು.</p>.<p>ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸಿದೆ. ಸಾಕಷ್ಟು ಸವಾಲುಗಳು ಮುಂದಿವೆ. ಮುಂದಿನ ವರ್ಷ ಸಹಕಾರಿ ಕ್ಷೇತ್ರಕ್ಕೆ 120 ವರ್ಷ ತುಂಬಲಿದೆ. ಸಂಸ್ಥೆಯ ನಿರ್ದೇಶಕ ಅಥವಾ ಅಧ್ಯಕ್ಷನಾದರೆ ಮಾತ್ರ ನೈಜ ಸಹಕಾರಿಯಲ್ಲ. ಸಹಕಾರಿ ಸಂಸ್ಥೆ ಕಟ್ಟುವವನು ನೈಜ ಸಹಕಾರಿ ಎಂದು ತಿಳಿಸಿದರು.</p>.<p>ರಾಜ್ಯದಲ್ಲಿ ಆರು ಸಾವಿರಕ್ಕೂ ಅಧಿಕ ಸೌಹಾರ್ದ ಸಹಕಾರಿ ಸಂಸ್ಥೆಗಳಿದ್ದು, ₹ 50 ಸಾವಿರ ಕೋಟಿ ವಹಿವಾಟು ನಡೆಸುತ್ತಿವೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುತ್ತದೆಯೇ ಎಂಬುದರ ಬಗ್ಗೆ ಸಂಸ್ಥೆಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. </p>.<p>ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಯಶವಂತ ಡೋಂಗ್ರೆ ಅವರ ‘ಅಟಾನಮಿ, ಗವರ್ನೆನ್ಸ್ ಆ್ಯಂಡ್ ಎಂಪವರ್ಮೆಂಟ್: ಸ್ಟಡಿ ಆಫ್ ಸೌಹಾರ್ದ ಕೋಆಪರೇಟಿವ್ಸ್’ ಮತ್ತು ಸಿ.ಎನ್.ಪರಶಿವಮೂರ್ತಿ ಅವರ ‘ಸೌಹಾರ್ದ ಸಹಕಾರಿ ಕಾಯಿದೆ ಆಡಳಿತ ಕೈಪಿಡಿ‘ ಹಾಗೂ ಶಶಿಧರ ಎಲೆ ಅವರ ‘ಸಹಕಾರ ಅವಲೋಕನ’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಸಹಕಾರ ಹಾಗೂ ಬ್ಯಾಂಕಿಂಗ್ ಮ್ಯಾನೇಜ್ಮೆಂಟ್ ಡಿಪ್ಲೊಮಾ ಕಾರ್ಯಕ್ರಮದ ಮೊದಲನೇ ತಂಡದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. </p>.<p>ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ವಿ ನಾಡಗೌಡರ, ವಿಶ್ರಾಂತ ಕುಲಪತಿ ವಿಷ್ಣುಕಾಂತ ಚಟಪಲ್ಲಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷ ಜಿ.ನಂಜನಗೌಡ, ಉಪಾಧ್ಯಕ್ಷ ಎ.ಆರ್.ಪ್ರಸನ್ನ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಹಕಾರಿ ಸಂಸ್ಥೆಗಳಲ್ಲಿ ಅಕ್ರಮ, ಕಾನೂನು ಉಲ್ಲಂಘನೆಯ ಆರೋಪದ ದೂರುಗಳು ಹೆಚ್ಚುತ್ತಿವೆ. ಸಹಕಾರ ಸಂಸ್ಥೆಗಳಿಗೆ ಸ್ವಾತಂತ್ರ್ಯ ನೀಡಿದ್ದು ತಪ್ಪಾಯಿತು ಎಂಬ ಭಾವನೆ ಮೂಡುತ್ತಿದೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.</p>.<p>ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಆಶ್ರಯದಲ್ಲಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಹಕಾರಿ ಸಂಸ್ಥೆಗಳ ನೇಮಕಾತಿಯಲ್ಲಿ ಪಾರ್ದರ್ಶಕತೆ ಇಲ್ಲದಿರುವುದು, ಬಡ್ಡಿ ಪ್ರಮಾಣ ಹೆಚ್ಚಳ ಸೇರಿದಂತೆ ಹಲವು ದೂರುಗಳು ಬಂದಿವೆ. ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗದಿದ್ದರೆ ಸಂಸ್ಥೆಗಳು ಉಳಿಯುವುದಿಲ್ಲ’ ಎಂದರು.</p>.<p>ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸಿದೆ. ಸಾಕಷ್ಟು ಸವಾಲುಗಳು ಮುಂದಿವೆ. ಮುಂದಿನ ವರ್ಷ ಸಹಕಾರಿ ಕ್ಷೇತ್ರಕ್ಕೆ 120 ವರ್ಷ ತುಂಬಲಿದೆ. ಸಂಸ್ಥೆಯ ನಿರ್ದೇಶಕ ಅಥವಾ ಅಧ್ಯಕ್ಷನಾದರೆ ಮಾತ್ರ ನೈಜ ಸಹಕಾರಿಯಲ್ಲ. ಸಹಕಾರಿ ಸಂಸ್ಥೆ ಕಟ್ಟುವವನು ನೈಜ ಸಹಕಾರಿ ಎಂದು ತಿಳಿಸಿದರು.</p>.<p>ರಾಜ್ಯದಲ್ಲಿ ಆರು ಸಾವಿರಕ್ಕೂ ಅಧಿಕ ಸೌಹಾರ್ದ ಸಹಕಾರಿ ಸಂಸ್ಥೆಗಳಿದ್ದು, ₹ 50 ಸಾವಿರ ಕೋಟಿ ವಹಿವಾಟು ನಡೆಸುತ್ತಿವೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುತ್ತದೆಯೇ ಎಂಬುದರ ಬಗ್ಗೆ ಸಂಸ್ಥೆಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. </p>.<p>ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಯಶವಂತ ಡೋಂಗ್ರೆ ಅವರ ‘ಅಟಾನಮಿ, ಗವರ್ನೆನ್ಸ್ ಆ್ಯಂಡ್ ಎಂಪವರ್ಮೆಂಟ್: ಸ್ಟಡಿ ಆಫ್ ಸೌಹಾರ್ದ ಕೋಆಪರೇಟಿವ್ಸ್’ ಮತ್ತು ಸಿ.ಎನ್.ಪರಶಿವಮೂರ್ತಿ ಅವರ ‘ಸೌಹಾರ್ದ ಸಹಕಾರಿ ಕಾಯಿದೆ ಆಡಳಿತ ಕೈಪಿಡಿ‘ ಹಾಗೂ ಶಶಿಧರ ಎಲೆ ಅವರ ‘ಸಹಕಾರ ಅವಲೋಕನ’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಸಹಕಾರ ಹಾಗೂ ಬ್ಯಾಂಕಿಂಗ್ ಮ್ಯಾನೇಜ್ಮೆಂಟ್ ಡಿಪ್ಲೊಮಾ ಕಾರ್ಯಕ್ರಮದ ಮೊದಲನೇ ತಂಡದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. </p>.<p>ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ವಿ ನಾಡಗೌಡರ, ವಿಶ್ರಾಂತ ಕುಲಪತಿ ವಿಷ್ಣುಕಾಂತ ಚಟಪಲ್ಲಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷ ಜಿ.ನಂಜನಗೌಡ, ಉಪಾಧ್ಯಕ್ಷ ಎ.ಆರ್.ಪ್ರಸನ್ನ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>