‘ಕಾಮಗಾರಿ ವೇಳೆ ತೆರವುಗೊಳಿಸಿದ ಮಣ್ಣು ಈಗಲೂ ಕೆಲವೆಡೆ ರಸ್ತೆ ಮೇಲೆಯೇ ಇದೆ. ಇದೇ 14ರಿಂದ ಲಾಕ್ಡೌನ್ ತೆರವಾಗಲಿದೆ. ಆ ಬಳಿಕ ಸಾರ್ವಜನಿಕರ ಓಡಾಟ ಮತ್ತು ವಾಹನಗಳ ಸಂಚಾರಕ್ಕೆ ಇದರಿಂದ ಅಡ್ಡಿ ಉಂಟಾಗಲಿದೆ. ರಸ್ತೆಯಲ್ಲಿರುವ ಮಣ್ಣು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಉಂಟಾಗದಂತೆ ನೋಡಿಕೊಳ್ಳಬೇಕು. ರಸ್ತೆ ಅಗೆದಿರುವ ಭಾಗಗಳಲ್ಲಿ ಸರಿಯಾಗಿ ಬ್ಯಾರಿಕೇಡ್ ಹಾಕಬೇಕು. ತೆರೆದಿರುವ ಮ್ಯಾನ್ ಹೋಲ್ಗಳನ್ನು ಮುಚ್ಚಬೇಕು’ ಎಂದು ಅವರು ಗುತ್ತಿಗೆದಾರರಿಗೆ ಸೂಚಿಸಿದರು.