<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಉದ್ದಿಮೆ ಪರವಾನಗಿಯನ್ನು ಒಂದು ವರ್ಷದಿಂದ ಐದು ವರ್ಷದವರೆಗೆ ನವೀಕರಣ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಫೆಬ್ರುವರಿ 1ರಿಂದ 28ರವರೆಗೆ ದಂಡವಿಲ್ಲದೆ ಉದ್ದಿಮೆ ಪರವಾನಗಿ ಶುಲ್ಕವನ್ನು ಆನ್ಲೈನ್ ಹಾಗೂ ಬ್ಯಾಂಕ್ ಚಲನ್ ಮೂಲಕ ಕೆನರಾ ಬ್ಯಾಂಕಿನಲ್ಲಿ ದಂಡವಿಲ್ಲದೆ ಪಾವತಿಸಿಕೊಳ್ಳಬೇಕು. ಮಾರ್ಚ್ 1ರಿಂದ 31ರವರೆಗೆ ನವೀಕರಣ ಶುಲ್ಕದ ಶೇ 25ರಷ್ಟು ದಂಡ , ಏಪ್ರಿಲ್ 1ರಿಂದ ಶೇ 100ರಷ್ಟು ದಂಡ ವಿಧಿಸಬೇಕು’ ಎಂದು ತಿಳಿಸಿದ್ದಾರೆ.</p>.<p>ವಸತಿ ಪ್ರದೇಶದಲ್ಲಿ 40 ಅಡಿಗಿಂತ ಕಡಿಮೆ ಅಗಲದ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆ ಪರವಾನಗಿಯನ್ನು ತಡೆಹಿಡಿಯಬೇಕು. 40 ಅಡಿಗಳಿಗಿಂತ ಹೆಚ್ಚು ಅಗಲದ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆಗಳಿಗೆ ಮಾತ್ರ ಪರವಾನಗಿ ನವೀಕರಣ ಮಾಡಬೇಕು ಎಂದು ಸೂಚಿಸಿದ್ದಾರೆ.</p>.<p>‘ನಕ್ಷೆ ಉಲ್ಲಂಘನೆಯಾಗಿರುವ ಕಟ್ಟಡಗಳಲ್ಲಿ ಪೂರ್ತಿ ಅಥವಾ ಭಾಗಶಃವಾಗಿ ಉದ್ದಿಮೆಗಳಿದ್ದರೆ, ವಾಹನ ನಿಲುಗಡೆ ಪ್ರದೇಶದಲ್ಲಿ, ಚಾವಣಿ ಪ್ರದೇಶವನ್ನೂ ಬಳಸುತ್ತಿದ್ದರೆ, ಪರವಾನಗಿ ನವೀಕರಣ ಮಾಡುವಂತಿಲ್ಲ’ ಎಂದಿದ್ದಾರೆ.</p>.<p>ಉದ್ದಿಮೆಗಳು, ಕಲ್ಯಾಣ ಮಂಟಪಗಳು ಹೋಟೆಲ್, ರೆಸ್ಟೋರೆಂಟ್ ತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ನಿಷೇಧ ಪಾಲನೆ ಸೇರಿದಂತೆ ಘನತ್ಯಾಜ್ಯ ವಿಲೇವಾರಿ ನಿಯಮಗಳನ್ನು ಪಾಲಿಸುತ್ತಿರುವ ದಾಖಲೆಗಳನ್ನು ಪರಿಶೀಲಿಸಬೇಕು. ವಲಯ ಆರೋಗ್ಯಾಧಿಕಾರಿ, ಉಪ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿಗಳು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಎಲ್ಲ ಅಂಶಗಳನ್ನು ಪರಿಗಣಿಸಿ, 2025-26ನೇ ಸಾಲಿನ ಪರವಾನಗಿ ನವೀಕರಣ ನೀಡಬೇಕು ಎಂದು ಸೂಚಿಸಿದ್ದಾರೆ. </p>.<p class="Subhead">ಎಫ್ಐಆರ್: ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.</p>.<p>ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ, ಮಾರಾಟ ಮಾಡಲು ಅವರಿಗೆ ಸ್ಥಳ ನಿಗದಿಪಡಿಸಬೇಕು’ ಎಂದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಉದ್ದಿಮೆ ಪರವಾನಗಿಯನ್ನು ಒಂದು ವರ್ಷದಿಂದ ಐದು ವರ್ಷದವರೆಗೆ ನವೀಕರಣ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಫೆಬ್ರುವರಿ 1ರಿಂದ 28ರವರೆಗೆ ದಂಡವಿಲ್ಲದೆ ಉದ್ದಿಮೆ ಪರವಾನಗಿ ಶುಲ್ಕವನ್ನು ಆನ್ಲೈನ್ ಹಾಗೂ ಬ್ಯಾಂಕ್ ಚಲನ್ ಮೂಲಕ ಕೆನರಾ ಬ್ಯಾಂಕಿನಲ್ಲಿ ದಂಡವಿಲ್ಲದೆ ಪಾವತಿಸಿಕೊಳ್ಳಬೇಕು. ಮಾರ್ಚ್ 1ರಿಂದ 31ರವರೆಗೆ ನವೀಕರಣ ಶುಲ್ಕದ ಶೇ 25ರಷ್ಟು ದಂಡ , ಏಪ್ರಿಲ್ 1ರಿಂದ ಶೇ 100ರಷ್ಟು ದಂಡ ವಿಧಿಸಬೇಕು’ ಎಂದು ತಿಳಿಸಿದ್ದಾರೆ.</p>.<p>ವಸತಿ ಪ್ರದೇಶದಲ್ಲಿ 40 ಅಡಿಗಿಂತ ಕಡಿಮೆ ಅಗಲದ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆ ಪರವಾನಗಿಯನ್ನು ತಡೆಹಿಡಿಯಬೇಕು. 40 ಅಡಿಗಳಿಗಿಂತ ಹೆಚ್ಚು ಅಗಲದ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆಗಳಿಗೆ ಮಾತ್ರ ಪರವಾನಗಿ ನವೀಕರಣ ಮಾಡಬೇಕು ಎಂದು ಸೂಚಿಸಿದ್ದಾರೆ.</p>.<p>‘ನಕ್ಷೆ ಉಲ್ಲಂಘನೆಯಾಗಿರುವ ಕಟ್ಟಡಗಳಲ್ಲಿ ಪೂರ್ತಿ ಅಥವಾ ಭಾಗಶಃವಾಗಿ ಉದ್ದಿಮೆಗಳಿದ್ದರೆ, ವಾಹನ ನಿಲುಗಡೆ ಪ್ರದೇಶದಲ್ಲಿ, ಚಾವಣಿ ಪ್ರದೇಶವನ್ನೂ ಬಳಸುತ್ತಿದ್ದರೆ, ಪರವಾನಗಿ ನವೀಕರಣ ಮಾಡುವಂತಿಲ್ಲ’ ಎಂದಿದ್ದಾರೆ.</p>.<p>ಉದ್ದಿಮೆಗಳು, ಕಲ್ಯಾಣ ಮಂಟಪಗಳು ಹೋಟೆಲ್, ರೆಸ್ಟೋರೆಂಟ್ ತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ನಿಷೇಧ ಪಾಲನೆ ಸೇರಿದಂತೆ ಘನತ್ಯಾಜ್ಯ ವಿಲೇವಾರಿ ನಿಯಮಗಳನ್ನು ಪಾಲಿಸುತ್ತಿರುವ ದಾಖಲೆಗಳನ್ನು ಪರಿಶೀಲಿಸಬೇಕು. ವಲಯ ಆರೋಗ್ಯಾಧಿಕಾರಿ, ಉಪ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿಗಳು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಎಲ್ಲ ಅಂಶಗಳನ್ನು ಪರಿಗಣಿಸಿ, 2025-26ನೇ ಸಾಲಿನ ಪರವಾನಗಿ ನವೀಕರಣ ನೀಡಬೇಕು ಎಂದು ಸೂಚಿಸಿದ್ದಾರೆ. </p>.<p class="Subhead">ಎಫ್ಐಆರ್: ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.</p>.<p>ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ, ಮಾರಾಟ ಮಾಡಲು ಅವರಿಗೆ ಸ್ಥಳ ನಿಗದಿಪಡಿಸಬೇಕು’ ಎಂದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>