<p><strong>ಬೆಂಗಳೂರು:</strong> ನಗರದ ಪುರಭವನದಬಳಿ ಪ್ರತಿಭಟನೆ ನಡೆಸಲು ₹10 ಲಕ್ಷ ಮೊತ್ತದ ಬಾಂಡ್ ನೀಡುವುದನ್ನು ಪೊಲೀಸ್ ಇಲಾಖೆ ಕಡ್ಡಾಯ ಮಾಡಿದ್ದು, ಈ ನಿರ್ಧಾರ ಕೈಬಿಡುವಂತೆ ವಕೀಲರು, ಸಾಹಿತಿಗಳು ಒತ್ತಾಯಿಸಿದ್ದಾರೆ.</p>.<p>ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ, ವಕೀಲರಾದ ಎಚ್.ಡಿ.ಅಮರನಾಥ್, ಧನಂಜಯ, ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಡಾ.ಎಸ್.ಜಿ.ಸಿದ್ಧರಾಮಯ್ಯ, ಕಾಂಗ್ರೆಸ್ ಹಿರಿಯ ಮುಖಂಡ ಪ್ರೊ.ಬಿ.ಕೆ.ಚಂದ್ರಶೇಖರ್ ಅವರು ಬಾಂಡ್ ಕಡ್ಡಾಯ ಮಾಡಿರುವುದಕ್ಕೆ ಜಂಟಿ ಹೇಳಿಕೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಜಾರಿಗೊಳಿಸದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಬಾಂಡ್ ಕಡ್ಡಾಯ ಜಾರಿಯಾದರೆ ಇನ್ನು ಮುಂದೆ ಶ್ರೀಮಂತ ಸಂಘಟಕರಿಗೆ ಮಾತ್ರ ಪ್ರತಿಭಟಿಸುವ ಅವಕಾಶ ಇರುತ್ತದೆ. ದಲಿತರು, ಪ್ರಗತಿಪರರು, ಸಾಂಸ್ಕೃತಿಕ ಸಂಘಟನೆಗಳು</p>.<p>ಬಾಯಿ ಮುಚ್ಚಿಕೊಂಡು ತೆಪ್ಪಗಿರಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದವರಿಗೆ ಯಾವ ಗತಿ ಒದಗಿದೆ ಎಂಬುದಕ್ಕೆ ಇತಿಹಾಸದಲ್ಲಿ ಹಲವು ನಿದರ್ಶನಗಳಿವೆ. ಪುರಭವನದ ಬಳಿ ನಡೆದ ಪ್ರದರ್ಶನಗಳಲ್ಲಿ ಶೇ 90ರಷ್ಟು ಅಹಿಂಸಾತ್ಮಕವಾಗಿ ನಡೆದುಕೊಂಡು ಬರುತ್ತಿರುವಾಗ ಈ ಬಗೆಯ ಅನಗತ್ಯ ಅಧಿಕಾರ ಚಲಾವಣೆ ಏಕೆ? ಎಂದು ಪ್ರಶ್ನಿಸಿದ್ದಾರೆ.</p>.<p>ದಶಕಗಳಿಂದ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಚಳವಳಿ, ಪ್ರದರ್ಶನ, ಪ್ರತಿಭಟನೆ ನಡೆಸುತ್ತಾ ಬಂದಿದ್ದು, ಇವು ಪ್ರಜಾಪ್ರಭುತ್ವದ ಜೀವಂತಿಕೆಗೆ ಸಾಕ್ಷಿಯಾಗಿವೆ. ಇನ್ನು ಮುಂದೆ ಇವಕ್ಕೆಲ್ಲ ಕಡಿವಾಣ ಹಾಕುವ ಸಲುವಾಗಿ ₹10 ಲಕ್ಷ ಮೊತ್ತದ ಬಾಂಡ್ ನೀಡುವಂತೆ ಕೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಹಿಂಸೆಗೆ ತಿರುಗಿದ ಪ್ರತಿಭಟನೆಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ಅದು ಪೊಲೀಸರ ಅಸಮರ್ಪಕತೆಯನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಪುರಭವನದಬಳಿ ಪ್ರತಿಭಟನೆ ನಡೆಸಲು ₹10 ಲಕ್ಷ ಮೊತ್ತದ ಬಾಂಡ್ ನೀಡುವುದನ್ನು ಪೊಲೀಸ್ ಇಲಾಖೆ ಕಡ್ಡಾಯ ಮಾಡಿದ್ದು, ಈ ನಿರ್ಧಾರ ಕೈಬಿಡುವಂತೆ ವಕೀಲರು, ಸಾಹಿತಿಗಳು ಒತ್ತಾಯಿಸಿದ್ದಾರೆ.</p>.<p>ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ, ವಕೀಲರಾದ ಎಚ್.ಡಿ.ಅಮರನಾಥ್, ಧನಂಜಯ, ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಡಾ.ಎಸ್.ಜಿ.ಸಿದ್ಧರಾಮಯ್ಯ, ಕಾಂಗ್ರೆಸ್ ಹಿರಿಯ ಮುಖಂಡ ಪ್ರೊ.ಬಿ.ಕೆ.ಚಂದ್ರಶೇಖರ್ ಅವರು ಬಾಂಡ್ ಕಡ್ಡಾಯ ಮಾಡಿರುವುದಕ್ಕೆ ಜಂಟಿ ಹೇಳಿಕೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಜಾರಿಗೊಳಿಸದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಬಾಂಡ್ ಕಡ್ಡಾಯ ಜಾರಿಯಾದರೆ ಇನ್ನು ಮುಂದೆ ಶ್ರೀಮಂತ ಸಂಘಟಕರಿಗೆ ಮಾತ್ರ ಪ್ರತಿಭಟಿಸುವ ಅವಕಾಶ ಇರುತ್ತದೆ. ದಲಿತರು, ಪ್ರಗತಿಪರರು, ಸಾಂಸ್ಕೃತಿಕ ಸಂಘಟನೆಗಳು</p>.<p>ಬಾಯಿ ಮುಚ್ಚಿಕೊಂಡು ತೆಪ್ಪಗಿರಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದವರಿಗೆ ಯಾವ ಗತಿ ಒದಗಿದೆ ಎಂಬುದಕ್ಕೆ ಇತಿಹಾಸದಲ್ಲಿ ಹಲವು ನಿದರ್ಶನಗಳಿವೆ. ಪುರಭವನದ ಬಳಿ ನಡೆದ ಪ್ರದರ್ಶನಗಳಲ್ಲಿ ಶೇ 90ರಷ್ಟು ಅಹಿಂಸಾತ್ಮಕವಾಗಿ ನಡೆದುಕೊಂಡು ಬರುತ್ತಿರುವಾಗ ಈ ಬಗೆಯ ಅನಗತ್ಯ ಅಧಿಕಾರ ಚಲಾವಣೆ ಏಕೆ? ಎಂದು ಪ್ರಶ್ನಿಸಿದ್ದಾರೆ.</p>.<p>ದಶಕಗಳಿಂದ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಚಳವಳಿ, ಪ್ರದರ್ಶನ, ಪ್ರತಿಭಟನೆ ನಡೆಸುತ್ತಾ ಬಂದಿದ್ದು, ಇವು ಪ್ರಜಾಪ್ರಭುತ್ವದ ಜೀವಂತಿಕೆಗೆ ಸಾಕ್ಷಿಯಾಗಿವೆ. ಇನ್ನು ಮುಂದೆ ಇವಕ್ಕೆಲ್ಲ ಕಡಿವಾಣ ಹಾಕುವ ಸಲುವಾಗಿ ₹10 ಲಕ್ಷ ಮೊತ್ತದ ಬಾಂಡ್ ನೀಡುವಂತೆ ಕೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಹಿಂಸೆಗೆ ತಿರುಗಿದ ಪ್ರತಿಭಟನೆಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ಅದು ಪೊಲೀಸರ ಅಸಮರ್ಪಕತೆಯನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>