ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿಯೇ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದಿಂದ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ತೆರಿಗೆ ಪಾಲಿನಲ್ಲಿಯೂ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ದಕ್ಷಿಣ ಭಾರತದ ರಾಜ್ಯಗಳಿಂದ ಸಂಗ್ರಹಿಸಿದ ಸಂಪನ್ಮೂಲಗಳನ್ನು ಉತ್ತರ ಭಾರತದ ಹಾಗೂ ಅವರಿಗೆ ಬೇಕಾದ ರಾಜ್ಯಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸುತ್ತಿರುವವರಿಗೆ ಭಾರಿ ನಷ್ಟವಾಗುತ್ತಿದೆ’ ಎಂದರು.