ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್ ಮಾತನಾಡಿ, ‘ಕಾಂಗ್ರೆಸ್ ಪಕ್ಷದಿಂದ ವ್ಯಕ್ತಿಯೇ ಹೊರತು ಕೇವಲ ವ್ಯಕ್ತಿಯೊಬ್ಬರಿಂದ ಕಾಂಗ್ರೆಸ್ ಪಕ್ಷವಲ್ಲ’ ಎಂದು ಪರೋಕ್ಷವಾಗಿ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್ ಅವರಿಗೆ ಟಾಂಗ್ ನೀಡಿದರು. ‘ನಾನು ಇದೇ ತಾಲ್ಲೂಕಿಗೆ ಸೇರಿದವನು. ನನ್ನ ಅಜ್ಜಿಯ ಊರು ಹೊಸಕೋಟೆ. ಪಕ್ಷದ ಅದೇಶದಂತೆ ಮುಂದಿನ ಉಪಚುನಾವಣೆಯಲ್ಲಿ ಪತ್ನಿ ಪದ್ಮಾವತಿ ಕಣಕ್ಕಿಳಿಯಲಿದ್ದು ಪಕ್ಷದ ಸಂಘಟನೆಗೆ ತಾಲ್ಲೂಕಿನ ಮುಖಂಡರು, ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ’ ಎಂದರು.