ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮತ್ತು ಪಕ್ಷದ ಹಿರಿಯ ಮುಖಂಡ ಬಿ.ಎಲ್.ಶಂಕರ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದಶಾಸಕ ಪ್ರಿಯಾಂಕ್ ಖರ್ಗೆ, ‘ಆರು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದರೂ, ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸರ್ಕಾರ ಯಾವುದೇ ಯೋಜನೆ ರೂಪಿಸಿಲ್ಲ. ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಕುಸಿದುಬಿದ್ದಿದೆ’ ಎಂದು ಟೀಕಿಸಿದರು.