ಎನ್.ಎ. ಹ್ಯಾರೀಸ್ ಮಾತನಾಡಿ, ‘2005ರ ಕಾಯ್ದೆ ಅನ್ವಯ ವಿಪತ್ತು ನಿರ್ವಹಣಾ ನಿಧಿಯನ್ನು ವಿಪತ್ತು ನಿರ್ವಹಣೆಗೇ ಬಳಸಬೇಕು. ಕೇಂದ್ರ ಸರ್ಕಾರ ಕೋವಿಡ್ನಿಂದ ಮೃತಪಟ್ಟವರಿಗೆ ₹ 4ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಸಮಯದಲ್ಲಿ ಅದನ್ನು ಬಳಸಿಕೊಳ್ಳದಿದ್ದರೆ ಯಾವಾಗ ಬಳಸಿಕೊಳ್ಳಲಾಗುತ್ತದೆ’ ಎಂದು ಪ್ರಶ್ನಿಸಿದರು.