<p><strong>ಬೆಂಗಳೂರು:</strong> ತೈಲ ಏರಿಕೆ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಸೈಕಲ್ ರ್ಯಾಲಿ ಕೆಪಿಸಿಸಿ ಕಚೇರಿ ಮುಂಭಾಗದಿಂದ ಬುಧವಾರ ಬೆಳಿಗ್ಗೆ ಆರಂಭಗೊಂಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತು ಸಲೀಂ ಅಹ್ಮದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ಏರಿ ಜಾಥಾದಲ್ಲಿ ಭಾಗವಹಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿದ ವ್ಯಕ್ತಿ ಸೈಕಲ್ ತುಳಿದದ್ದು ಗಮನ ಸೆಳೆಯಿತು. ಇನ್ನೊಂದೆಡೆ ಕುದುರೆ ಟಾಂಗಾ ಮೆರವಣಿಗೆಯಲ್ಲಿ ಕಂಡು ಬಂತು. ಸಾಕಷ್ಟು ಸಂಖ್ಯೆಯಲ್ಲಿ ಯುವಕರು ಹಾಗೂ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಜಾಥಾ ನಡೆಯಿತು.</p>.<p>ಸೈಕಲ್ ಜಾಥಾಗೆ ಚಾಲನೆ ನೀಡುವುದಕ್ಕೂ ಮೊದಲು ರಾಮಲಿಂಗಾರೆಡ್ಡಿ ಮತ್ತು ಸಲೀಂ ಅಹ್ಮದ್ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನಗತ್ಯವಾಗಿ ಬೆಲೆ ಏರಿಕೆ ಮಾಡುತ್ತಿವೆ. ಎರಡೂ ಸರ್ಕಾರಿಗಳು ಜನ ವಿರೋಧಿ ಆಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಹಳೆ ಊದಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಬೆಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾ ನಡೆಸಿದ್ದಾರೆ.</p>.<p>ಕೆಪಿಸಿಸಿ ಕಚೇರಿಯಿಂದ ಕ್ವೀನ್ಸ್ ರಸ್ತೆಯ ಮೂಲಕ ಸೈಕಲ್ನಲ್ಲಿ ಸಾಗಿದ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದರು. ಆದರೆ, ಕಾಂಗ್ರೆಸ್ ನಾಯಕರು ಕ್ವೀನ್ಸ್ ರಸ್ತೆಯಿಂದ ಕಾರ್ಪೊರೇಷನ್ ವೃತ್ತದವರೆಗೂ ಸೈಕಲ್ ಜಾಥಾ ನಡೆಸಲು ಅವಕಾಶ ನೀಡುವಂತೆ ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತೈಲ ಏರಿಕೆ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಸೈಕಲ್ ರ್ಯಾಲಿ ಕೆಪಿಸಿಸಿ ಕಚೇರಿ ಮುಂಭಾಗದಿಂದ ಬುಧವಾರ ಬೆಳಿಗ್ಗೆ ಆರಂಭಗೊಂಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತು ಸಲೀಂ ಅಹ್ಮದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ಏರಿ ಜಾಥಾದಲ್ಲಿ ಭಾಗವಹಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿದ ವ್ಯಕ್ತಿ ಸೈಕಲ್ ತುಳಿದದ್ದು ಗಮನ ಸೆಳೆಯಿತು. ಇನ್ನೊಂದೆಡೆ ಕುದುರೆ ಟಾಂಗಾ ಮೆರವಣಿಗೆಯಲ್ಲಿ ಕಂಡು ಬಂತು. ಸಾಕಷ್ಟು ಸಂಖ್ಯೆಯಲ್ಲಿ ಯುವಕರು ಹಾಗೂ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಜಾಥಾ ನಡೆಯಿತು.</p>.<p>ಸೈಕಲ್ ಜಾಥಾಗೆ ಚಾಲನೆ ನೀಡುವುದಕ್ಕೂ ಮೊದಲು ರಾಮಲಿಂಗಾರೆಡ್ಡಿ ಮತ್ತು ಸಲೀಂ ಅಹ್ಮದ್ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನಗತ್ಯವಾಗಿ ಬೆಲೆ ಏರಿಕೆ ಮಾಡುತ್ತಿವೆ. ಎರಡೂ ಸರ್ಕಾರಿಗಳು ಜನ ವಿರೋಧಿ ಆಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಹಳೆ ಊದಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಬೆಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾ ನಡೆಸಿದ್ದಾರೆ.</p>.<p>ಕೆಪಿಸಿಸಿ ಕಚೇರಿಯಿಂದ ಕ್ವೀನ್ಸ್ ರಸ್ತೆಯ ಮೂಲಕ ಸೈಕಲ್ನಲ್ಲಿ ಸಾಗಿದ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದರು. ಆದರೆ, ಕಾಂಗ್ರೆಸ್ ನಾಯಕರು ಕ್ವೀನ್ಸ್ ರಸ್ತೆಯಿಂದ ಕಾರ್ಪೊರೇಷನ್ ವೃತ್ತದವರೆಗೂ ಸೈಕಲ್ ಜಾಥಾ ನಡೆಸಲು ಅವಕಾಶ ನೀಡುವಂತೆ ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>