ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಮಾತನಾಡಿ, ‘ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಜಮೀನು ಖರೀದಿಯಲ್ಲೂ ಹಗರಣ ನಡೆದಿದೆ. ಟ್ರಸ್ಟ್ನಲ್ಲಿರುವ ಬಿಜೆಪಿ ಮುಖಂಡ ಅನಿಲ್ ಮಿಶ್ರಾ ಮತ್ತು ಋಷಿಕೇಶ್ ಉಪಾಧ್ಯಾಯ ಕೂಡ ಇದಕ್ಕೆ ಸಾಕ್ಷಿಯಾಗಿದ್ದಾರೆ. ಧರ್ಮ, ಸಂಸ್ಕೃತಿ ಹೆಸರಿನಲ್ಲೂ ಲೂಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.