<p>ಬೆಂಗಳೂರು: ‘ಕೋವಿಡ್ ಕಾರಣದಿಂದ ಬಿಬಿಎಂಪಿಯಲ್ಲಿ ಬರುವ ರೆಸಿಡೆನ್ಸಿಯಲ್ ಬಿಲ್ಡಿಂಗ್ ಮತ್ತು ಕಮರ್ಷಿಲ್ ಬಿಲ್ದಿಂಗ್ಗಳ ಮಾಲೀಕರಿಗೆ ಬಾಡಿಗೆ ಬಂದಿಲ್ಲ. ಹೀಗಾಗಿ, ಈ ಮಾಲೀಕರ ಆಸ್ತಿ ತೆರಿಗೆಯನ್ನು ಕಡ್ಡಾಯವಾಗಿ ಮನ್ನಾ ಮಾಡಬೇಕು’ ಎಂದು ಬೆಂಗಳೂರು ಕೇಂದ್ರ ಮತ್ತು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.</p>.<p>‘ಬಾಡಿಗೆ ಕೊಡುವ ಅಗತ್ಯ ಇಲ್ಲವೆಂದು ಸರ್ಕಾರವೇ ಹೇಳಿದೆ. ಈ ಪರಿಸ್ಥಿತಿಯಲ್ಲಿ ಆಸ್ತಿ ಮಾಲೀಕರು ತೆರಿಗೆ ಹೇಗೆ ಕಟ್ಟಲು ಸಾಧ್ಯ. ಜೀವನ ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ, ಆಸ್ತಿ ತೆರಿಗೆ ಸಂಪೂರ್ಣ ಮನ್ನಾ ಮಾಡುವಂತೆ ಈಗಾಗಲೇ ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಆದರೂ ಸರ್ಕಾರ ಆಸ್ತಿ ಮಾಲೀಕರ ಜೀವನದ ಮೇಲೆ ಚೆಲ್ಲಾಟವಾಡುತ್ತಿದೆ’<br />ಎಂದು ಕೇಂದ್ರ ಜಿಲ್ಲಾ ಸಮಿತಿಯ ಅಧ್ಯಕ್ಷ ಜಿ. ಶೇಖರ್ ಮತ್ತು ದಕ್ಷಿಣ ಜಿಲ್ಲಾ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ದೂರಿದ್ದಾರೆ.</p>.<p>‘ಕುಂಟುನೆಪ ಹೇಳಿಕೊಂಡು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಲು ಸರ್ಕಾರ ಪ್ರಯತ್ನಿಸುತ್ತಿದೆ. ವಾರ್ಡ್ಗಳ ಸಂಖ್ಯೆ ಹೆಚ್ಚಾದರೂ ಸರಿಯೇ, ಯಾವುದೇ ಕಾರಣಕ್ಕೂ ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಸರಿಯಾದ ಸಮಯದಲ್ಲಿ ನಡೆಸಬೇಕು. ಇಲ್ಲ<br />ವಾದರೆ ನ್ಯಾಯಾಲಯದ ಮೊರೆ ಹೋಗು ತ್ತೇವೆ’ ಎಂದೂ ಎಚ್ಚರಿಕೆ ನೀಡಿದ್ದಾರೆ.</p>.<p>‘ಹಳಿ ತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಮತ್ತೆ ಸರಿದಾರಿಗೆ ತರಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು. ಪಿಯುಸಿಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ 4 ವರ್ಷದ ಬ್ಯಾಚುಲರ್ ಆಫ್ ವಿಶ್ಯುವಲ್ ಆರ್ಟ್ಸ್ (ಬಿವಿಎ) ಪದವಿಗೆ ಪ್ರವೇಶ ನೀಡಬೇಕು. ಆದರೆ, ಹಂಪಿ ವಿಶ್ವವಿದ್ಯಾಲಯ ನಿಯಮ ಉಲ್ಲಂಘಿಸಿ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಪ್ರವೇಶ ನೀಡುತ್ತಿದೆ ಎಂದು ಮಾಧ್ಯವ ವರದಿಯಿಂದ ಗೊತ್ತಾಗಿದೆ. ಈ ವಿಷಯ ಸಚಿವರ ಗಮನಕ್ಕೆ ಬಂದಿಲ್ಲವೇ’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೋವಿಡ್ ಕಾರಣದಿಂದ ಬಿಬಿಎಂಪಿಯಲ್ಲಿ ಬರುವ ರೆಸಿಡೆನ್ಸಿಯಲ್ ಬಿಲ್ಡಿಂಗ್ ಮತ್ತು ಕಮರ್ಷಿಲ್ ಬಿಲ್ದಿಂಗ್ಗಳ ಮಾಲೀಕರಿಗೆ ಬಾಡಿಗೆ ಬಂದಿಲ್ಲ. ಹೀಗಾಗಿ, ಈ ಮಾಲೀಕರ ಆಸ್ತಿ ತೆರಿಗೆಯನ್ನು ಕಡ್ಡಾಯವಾಗಿ ಮನ್ನಾ ಮಾಡಬೇಕು’ ಎಂದು ಬೆಂಗಳೂರು ಕೇಂದ್ರ ಮತ್ತು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.</p>.<p>‘ಬಾಡಿಗೆ ಕೊಡುವ ಅಗತ್ಯ ಇಲ್ಲವೆಂದು ಸರ್ಕಾರವೇ ಹೇಳಿದೆ. ಈ ಪರಿಸ್ಥಿತಿಯಲ್ಲಿ ಆಸ್ತಿ ಮಾಲೀಕರು ತೆರಿಗೆ ಹೇಗೆ ಕಟ್ಟಲು ಸಾಧ್ಯ. ಜೀವನ ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ, ಆಸ್ತಿ ತೆರಿಗೆ ಸಂಪೂರ್ಣ ಮನ್ನಾ ಮಾಡುವಂತೆ ಈಗಾಗಲೇ ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಆದರೂ ಸರ್ಕಾರ ಆಸ್ತಿ ಮಾಲೀಕರ ಜೀವನದ ಮೇಲೆ ಚೆಲ್ಲಾಟವಾಡುತ್ತಿದೆ’<br />ಎಂದು ಕೇಂದ್ರ ಜಿಲ್ಲಾ ಸಮಿತಿಯ ಅಧ್ಯಕ್ಷ ಜಿ. ಶೇಖರ್ ಮತ್ತು ದಕ್ಷಿಣ ಜಿಲ್ಲಾ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ದೂರಿದ್ದಾರೆ.</p>.<p>‘ಕುಂಟುನೆಪ ಹೇಳಿಕೊಂಡು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಲು ಸರ್ಕಾರ ಪ್ರಯತ್ನಿಸುತ್ತಿದೆ. ವಾರ್ಡ್ಗಳ ಸಂಖ್ಯೆ ಹೆಚ್ಚಾದರೂ ಸರಿಯೇ, ಯಾವುದೇ ಕಾರಣಕ್ಕೂ ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಸರಿಯಾದ ಸಮಯದಲ್ಲಿ ನಡೆಸಬೇಕು. ಇಲ್ಲ<br />ವಾದರೆ ನ್ಯಾಯಾಲಯದ ಮೊರೆ ಹೋಗು ತ್ತೇವೆ’ ಎಂದೂ ಎಚ್ಚರಿಕೆ ನೀಡಿದ್ದಾರೆ.</p>.<p>‘ಹಳಿ ತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಮತ್ತೆ ಸರಿದಾರಿಗೆ ತರಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು. ಪಿಯುಸಿಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ 4 ವರ್ಷದ ಬ್ಯಾಚುಲರ್ ಆಫ್ ವಿಶ್ಯುವಲ್ ಆರ್ಟ್ಸ್ (ಬಿವಿಎ) ಪದವಿಗೆ ಪ್ರವೇಶ ನೀಡಬೇಕು. ಆದರೆ, ಹಂಪಿ ವಿಶ್ವವಿದ್ಯಾಲಯ ನಿಯಮ ಉಲ್ಲಂಘಿಸಿ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಪ್ರವೇಶ ನೀಡುತ್ತಿದೆ ಎಂದು ಮಾಧ್ಯವ ವರದಿಯಿಂದ ಗೊತ್ತಾಗಿದೆ. ಈ ವಿಷಯ ಸಚಿವರ ಗಮನಕ್ಕೆ ಬಂದಿಲ್ಲವೇ’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>