ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಕ್ಷ್ಮಿ ಲೇಔಟ್‌: ಕಾಂಗ್ರೆಸ್ ಪ್ರಚಾರ

Last Updated 28 ನವೆಂಬರ್ 2019, 11:39 IST
ಅಕ್ಷರ ಗಾತ್ರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಪರ ಶಾಸಕ
ರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ ಬುಧವಾರ ಪ್ರಚಾರ ನಡೆಸಿದರು.

ಕಮಲಾನಗರ ಮುಖ್ಯರಸ್ತೆಯಲ್ಲಿ ಮತಯಾಚನೆ ಆರಂಭಿಸಿದರು. ನಂತರ ಶಕ್ತಿ ಗಣಪತಿ ವಾರ್ಡ್‌ನ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ಮಾಡಿದರು.‘ಆಯ್ಕೆಯಾಗಿದ್ದ ಪಕ್ಷಕ್ಕೆ ದ್ರೋಹ ಮಾಡಿ ಪಕ್ಷಾಂತರ ಮಾಡಿದ್ದಾರೆ. ಅನರ್ಹ ಶಾಸಕರಾಗಿ, ಮತ್ತೆ ಚುನಾವಣೆಗೆ ಸ್ಪರ್ಧಿಸಿರುವ 17 ಮಂದಿಗೂ ಮತದಾರರು ತಕ್ಕ ಪಾಠ ಕಲಿಸಬೇಕು. ಕ್ಷೇತ್ರದಲ್ಲಿ ಶಾಂತಿ ನೆಲೆಸಲು ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಬೇಕು’ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಹಣ, ಅಧಿಕಾರಕ್ಕಾಗಿ ಪಕ್ಷಕ್ಕೆ ದ್ರೋಹ ಮಾಡಿರುವ ಅನರ್ಹ ಶಾಸಕರನ್ನು ಮನೆಗೆ ಕಳುಹಿಸಬೇಕು ಎಂದು ಕೃಷ್ಣ ಬೈರೇಗೌಡ ಮನವಿ ಮಾಡಿದರು.‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ₹10 ಸಾವಿರ ಕೋಟಿ ಅನುದಾನ ಕೊಡಲಾಗಿತ್ತು. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ನಂತಹ ಜನಪರ ಯೋಜನೆಗಳು ಆರಂಭಗೊಂಡಿದ್ದವು’ ಎಂದು ಶಿವರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT