ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮಾತನಾಡಿ, ‘ಹಾಲು ಉತ್ಪಾದಕರಿಗೆ ಆರು ತಿಂಗಳಿನಿಂದ ಪ್ರೋತ್ಸಾಹಧನ ಪಾವತಿಯಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಕೃಷಿ ಕ್ಷೇತ್ರಕ್ಕೆ ₹7,500 ಕೋಟಿ ಒದಗಿಸಿತ್ತು. ಕಾಂಗ್ರೆಸ್ ಸರ್ಕಾರವು ತನ್ನ ಬಜೆಟ್ನಲ್ಲಿ ₹3,500 ಕೋಟಿಯನ್ನು ಕಿತ್ತುಕೊಂಡಿದೆ. ಈ ಎಲ್ಲ ವಿಚಾರಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದರು.