<p>ಪ್ರಜಾವಾಣಿ ವಾರ್ತೆ</p>.<p>ನೆಲಮಂಗಲ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p><p>ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು.</p><p>‘ಕಳೆದ ಲೋಕಸಭಾ ಚುನಾವಣೆಯಲ್ಲಿ 151 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇದು ನಮ್ಮ ಗೆಲುವಿಗೆ ದಿಕ್ಸೂಚಿಯಾಗಿದೆ. ಆದ್ದರಿಂದ ಯಾರೂ ಹತಾಶರಾಗದೆ ಇಂದಿನಿಂದಲೇ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಿ’ ಎಂದರು.</p><p>‘ಬೆಂಗಳೂರಿನ ಕೊಳಚೆ ನೀರನ್ನು ವೃಷಭಾವತಿ ಯೋಜನೆ ಮೂಲಕ ಕೆರೆಗಳಿಗೆ ತುಂಬಿಸುವ ಯೋಜನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಇದರ ವಿರುದ್ಧ ಹೋರಾಟ ರೂಪಿಸುತ್ತೇವೆ’ ಎಂದರು.</p><p>ಇದೇ ವೇಳೆ ನಗರಸಭೆ ವ್ಯಾಪ್ತಿಯ ಯುವ ಘಟಕದ ಅಧ್ಯಕ್ಷರಾಗಿ ವಿಷ್ಣು, ವಕ್ತಾರರಾಗಿ ಕನಕರಾಜು, ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಸಿ.ಪಾಲ್ಯಾತೀಥ ಅವರನ್ನು ನೇಮಿಸಿ, ನೇಮಕಾತಿ ಪತ್ರ ನೀಡಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಚೌಡೇಶ್ವರಿ ದೇವಸ್ಥಾನದಿಂದ ವೇದಿಕೆವರೆಗೆ ಬೈಕ್ ರ್ಯಾಲಿ ಮೂಲಕ ನಿಖಿಲ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಮಾಜಿ ಶಾಸಕರಾದ ಕೆ.ಶ್ರೀನಿವಾಸಮೂರ್ತಿ, ಎ.ಮಂಜು, ಇ.ಕೃಷ್ಣಪ್ಪ, ಬಮೂಲ್ ನಿರ್ದೇಶಕ ಭವಾನಿ ಶಂಕರ್ ಬೈರೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ನಗರಸಭೆ ಸದಸ್ಯ ಆಂಜನಮೂರ್ತಿ ಪಾಪಣ್ಣಿ, ಮುಖಂಡಾದ ಎಸ್.ಎಂಟಿ ಪ್ರಕಾಶ್, ಎಸ್.ಮಂಜುನಾಥ್, ಸುರೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ನೆಲಮಂಗಲ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p><p>ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು.</p><p>‘ಕಳೆದ ಲೋಕಸಭಾ ಚುನಾವಣೆಯಲ್ಲಿ 151 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇದು ನಮ್ಮ ಗೆಲುವಿಗೆ ದಿಕ್ಸೂಚಿಯಾಗಿದೆ. ಆದ್ದರಿಂದ ಯಾರೂ ಹತಾಶರಾಗದೆ ಇಂದಿನಿಂದಲೇ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಿ’ ಎಂದರು.</p><p>‘ಬೆಂಗಳೂರಿನ ಕೊಳಚೆ ನೀರನ್ನು ವೃಷಭಾವತಿ ಯೋಜನೆ ಮೂಲಕ ಕೆರೆಗಳಿಗೆ ತುಂಬಿಸುವ ಯೋಜನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಇದರ ವಿರುದ್ಧ ಹೋರಾಟ ರೂಪಿಸುತ್ತೇವೆ’ ಎಂದರು.</p><p>ಇದೇ ವೇಳೆ ನಗರಸಭೆ ವ್ಯಾಪ್ತಿಯ ಯುವ ಘಟಕದ ಅಧ್ಯಕ್ಷರಾಗಿ ವಿಷ್ಣು, ವಕ್ತಾರರಾಗಿ ಕನಕರಾಜು, ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಸಿ.ಪಾಲ್ಯಾತೀಥ ಅವರನ್ನು ನೇಮಿಸಿ, ನೇಮಕಾತಿ ಪತ್ರ ನೀಡಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಚೌಡೇಶ್ವರಿ ದೇವಸ್ಥಾನದಿಂದ ವೇದಿಕೆವರೆಗೆ ಬೈಕ್ ರ್ಯಾಲಿ ಮೂಲಕ ನಿಖಿಲ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಮಾಜಿ ಶಾಸಕರಾದ ಕೆ.ಶ್ರೀನಿವಾಸಮೂರ್ತಿ, ಎ.ಮಂಜು, ಇ.ಕೃಷ್ಣಪ್ಪ, ಬಮೂಲ್ ನಿರ್ದೇಶಕ ಭವಾನಿ ಶಂಕರ್ ಬೈರೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ನಗರಸಭೆ ಸದಸ್ಯ ಆಂಜನಮೂರ್ತಿ ಪಾಪಣ್ಣಿ, ಮುಖಂಡಾದ ಎಸ್.ಎಂಟಿ ಪ್ರಕಾಶ್, ಎಸ್.ಮಂಜುನಾಥ್, ಸುರೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>